ರಾಜ್ಯ

ಎಫ್‌ಐಆರ್‌ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಎಂಎಲ್‌ಸಿ ರವಿಕುಮಾರ್‌

ಬೆಂಗಳೂರು: ಎಫ್‌ಐಆರ್‌ ಪ್ರಶ್ನಿಸಿ ಎಂಎಲ್‌ಸಿ ರವಿಕುಮಾರ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ರವಿಕುಮಾರ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ತುರ್ತು ವಿಚಾರಣೆ ನಡೆಸುವಂತೆ ಪರ ವಕೀಲರು ಮನವಿ ಮಾಡಿದ್ದು, ಮನವಿ ಪರಿಗಣಿಸಿರುವ ಹೈಕೋರ್ಟ್‌ ಇಂದು ಮಧ್ಯಾಹ್ನದ ಬಳಿಕ ವಿಚಾರಣೆಗೆ ಸಮ್ಮತಿ ನೀಡಿದೆ.

ಸಿಎಸ್‌ ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ರವಿಕುಮಾರ್‌ ವಿರುದ್ಧ ಜೆ.ಪಿ.ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರವಿಕುಮಾರ್‌ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

34 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

1 hour ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago