ರಾಜ್ಯ

ಎಂಎಲ್‌ಸಿ ರವಿಕುಮಾರ್‌ ನಿಮ್ಹಾನ್ಸ್‌ನಲ್ಲಿ ಇರಬೇಕು: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಎಂಎಲ್‌ಸಿ ರವಿಕುಮಾರ್‌ ಬುದ್ಧಿ ಸರಿಯಿಲ್ಲ, ಹಾಗಾಗಿ ಅವರು ನಿಮ್ಹಾನ್ಸ್‌ನಲ್ಲಿ ಇರಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ರವಿಕುಮಾರ್‌ ಮೂಲತಃ ಬಿಜೆಪಿಯವರಲ್ಲ, ಆರ್‌ಎಸ್‌ಎಸ್‌ನಿಂದ ಬಂದವರು. ಮನುಸ್ಮೃತಿ ಹಿನ್ನೆಲೆಯಿಂದ ಬಂದಿದವರಾಗಿದ್ದಾರೆ. ಮನುಸ್ಮೃತಿಯಲ್ಲಿ ಮಹಿಳೆಯರ ಬಗ್ಗೆ ಏನು ಹೇಳಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ನಾಯಕರು ಸಂಸ್ಕೃತಿ ಬಗ್ಗೆ ಹೇಳುತ್ತಾರೆ. ಆದರೆ ಅವರ ಪಕ್ಷದ ನಾಯಕರಿಗೆ ಯಾವುದೂ ಅನ್ವಯವಾಗುತ್ತಿಲ್ಲ ಎಂದು ಕಿಡಿಕಾರಿದರು.

ರವಿಕುಮಾರ್‌ ಆಡಿದ ಮಾತುಗಳು ವಿಡಿಯೋದಲ್ಲಿಯೇ ರೆಕಾರ್ಡ್‌ ಆಗಿದೆ. ಇದಕ್ಕಿಂತ ಸಾಕ್ಷಿಯೇನು ಬೇಕು? ಇದು ಅವರ ಮನಃಸ್ಥಿತಿ ತೋರಿಸುತ್ತಿದೆ. ಕೊಳಕು ಮನಸ್ಸು, ಅವರ ಕೊಳಕು ಬುದ್ಧಿ, ಕೊಳಕು ನಾಲಿಗೆ ಇದನ್ನೆಲ್ಲಾ ಹೇಳಿಸುತ್ತಿದೆ. ಅಂದರೆ ಅವರ ಬುದ್ಧಿ ಸರಿಯಿಲ್ಲ ಎಂದರ್ಥ. ಹಾಗಾಗಿ ಅವರು ನಿಮ್ಹಾನ್ಸ್‌ಗೆ ಹೋಗಬೇಕು. ಮಹಿಳೆಯರಿಗೆ ಗೌರವ ಕೊಡಬೇಕು ಎಂಬುದು ಗೊತ್ತಿಲ್ಲ. ಮಾತಿನ ಮೇಲೆ ಹಿಡಿತವಿಲ್ಲ ಎಂದ ಮೇಲೆ ಅವರು ಹುಚ್ಛಾಸ್ಪತ್ರೆಯಲ್ಲಿರುವುದೇ ಸೂಕ್ತ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

38 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

51 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

53 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

55 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

57 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

1 hour ago