ರಾಜ್ಯ

ಎಂಎಲ್‌ಸಿ ರವಿಕುಮಾರ್‌ ನಿಮ್ಹಾನ್ಸ್‌ನಲ್ಲಿ ಇರಬೇಕು: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಎಂಎಲ್‌ಸಿ ರವಿಕುಮಾರ್‌ ಬುದ್ಧಿ ಸರಿಯಿಲ್ಲ, ಹಾಗಾಗಿ ಅವರು ನಿಮ್ಹಾನ್ಸ್‌ನಲ್ಲಿ ಇರಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ರವಿಕುಮಾರ್‌ ಮೂಲತಃ ಬಿಜೆಪಿಯವರಲ್ಲ, ಆರ್‌ಎಸ್‌ಎಸ್‌ನಿಂದ ಬಂದವರು. ಮನುಸ್ಮೃತಿ ಹಿನ್ನೆಲೆಯಿಂದ ಬಂದಿದವರಾಗಿದ್ದಾರೆ. ಮನುಸ್ಮೃತಿಯಲ್ಲಿ ಮಹಿಳೆಯರ ಬಗ್ಗೆ ಏನು ಹೇಳಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ನಾಯಕರು ಸಂಸ್ಕೃತಿ ಬಗ್ಗೆ ಹೇಳುತ್ತಾರೆ. ಆದರೆ ಅವರ ಪಕ್ಷದ ನಾಯಕರಿಗೆ ಯಾವುದೂ ಅನ್ವಯವಾಗುತ್ತಿಲ್ಲ ಎಂದು ಕಿಡಿಕಾರಿದರು.

ರವಿಕುಮಾರ್‌ ಆಡಿದ ಮಾತುಗಳು ವಿಡಿಯೋದಲ್ಲಿಯೇ ರೆಕಾರ್ಡ್‌ ಆಗಿದೆ. ಇದಕ್ಕಿಂತ ಸಾಕ್ಷಿಯೇನು ಬೇಕು? ಇದು ಅವರ ಮನಃಸ್ಥಿತಿ ತೋರಿಸುತ್ತಿದೆ. ಕೊಳಕು ಮನಸ್ಸು, ಅವರ ಕೊಳಕು ಬುದ್ಧಿ, ಕೊಳಕು ನಾಲಿಗೆ ಇದನ್ನೆಲ್ಲಾ ಹೇಳಿಸುತ್ತಿದೆ. ಅಂದರೆ ಅವರ ಬುದ್ಧಿ ಸರಿಯಿಲ್ಲ ಎಂದರ್ಥ. ಹಾಗಾಗಿ ಅವರು ನಿಮ್ಹಾನ್ಸ್‌ಗೆ ಹೋಗಬೇಕು. ಮಹಿಳೆಯರಿಗೆ ಗೌರವ ಕೊಡಬೇಕು ಎಂಬುದು ಗೊತ್ತಿಲ್ಲ. ಮಾತಿನ ಮೇಲೆ ಹಿಡಿತವಿಲ್ಲ ಎಂದ ಮೇಲೆ ಅವರು ಹುಚ್ಛಾಸ್ಪತ್ರೆಯಲ್ಲಿರುವುದೇ ಸೂಕ್ತ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

50 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

3 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

5 hours ago