ರಾಜ್ಯ

ಮನರೇಗಾ | ಬಹಿರಂಗ ಚರ್ಚೆಗೆ ನಾವು ಸಿದ್ಧ : ಡಿಸಿಎಂ ಡಿಕೆಶಿ

ಬೆಂಗಳೂರು : ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು ಯಾವಾಗ ಬೇಕಾದರೂ ಯಾವುದೇ ವೇದಿಕೆಯಲ್ಲಾದರೂ ಚರ್ಚೆ ಬರಲಿ, ನಾನು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿದರು.

ಅರಮನೆ ಮೈದಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಮನರೇಗಾ ವಿಚಾರವಾಗಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಾವು ಅದನ್ನು ತೀರ್ಮಾನ ಮಾಡುತ್ತೇವೆ. ವಿರೋಧ ಪಕ್ಷದವರು ಚರ್ಚೆಗೆ ಸಿದ್ಧ ಎಂದಿದ್ದಾರೆ. ಅವರು ಯಾವುದೇ ಮಾಧ್ಯಮ ವೇದಿಕೆಯಲ್ಲಾದರೂ, ಯಾವಾಗ ಕರೆದರೂ ನಾನು ಚರ್ಚೆಗೆ ಬರುತ್ತೇನೆ” ಎಂದರು.

*ಕುಮಾರಸ್ವಾಮಿ ಚರ್ಚೆಗೆ ಬಂದರೆ ಬಹಳ ಒಳ್ಳೆಯದು, ನಾನು ಸ್ವಾಗತಿಸುವೆ:*

ಕುಮಾರಸ್ವಾಮಿ ಅವರು ಚರ್ಚೆಗೆ ಬರುತ್ತಾರಂತೆ ಎಂದು ಕೇಳಿದಾಗ, “ನಾನು ಅವರನ್ನು ಸ್ವಾಗತಿಸುತ್ತೇನೆ. ಮೊದಲು ಅವರು ಬಂದರೆ ಬಹಳ ಒಳ್ಳೆಯದು. ಬಿಜೆಪಿ ರಾಜ್ಯ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಕುಮಾರಸ್ವಾಮಿ ಯಾರು ಬೇಕಾದರೂ ಬರಲಿ. ಅವರ ಪಂಥಾಹ್ವಾನ ಸ್ವೀಕಾರ ಮಾಡಿದ್ದೇನೆ. ಸಾರ್ವಜನಿಕ ವೇದಿಕೆ, ಅಧಿವೇಶನ ಅಥವಾ ಮಾಧ್ಯಮ ವೇದಿಕೆಯಾದರೂ ಸರಿ. ಚರ್ಚೆಗೆ ನಾನು ಸಿದ್ಧ” ಎಂದರು.

*ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯುವ ಕುಮಾರಸ್ವಾಮಿ ಮಾತು ಗಂಭೀರವಲ್ಲ:*

ಸಿದ್ದರಾಮಯ್ಯ ಅವರನ್ನು ಲೀಸ್ಡ್ ಸಿಎಂ ಎಂಬ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, “ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ. ಮೊದಲಿನಿಂದ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆದು ಹೋಗುವುದನ್ನು ನೋಡಿದ್ದೇವೆ. ಅವರ ಟೀಕೆಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡುತ್ತಾರೆ. ಆ ಸಾಮರ್ಥ್ಯ ಅವರಿಗಿದೆ. ಬಹಿರಂಗ ಚರ್ಚೆಗೆ ಯಾವಾಗ ಸಮಯ ನಿಗದಿ ಮಾಡುತ್ತೀರಾ ಹೇಳಿ. ಇವತ್ತು ಸಂಜೆಯಿಂದಲೇ ಚರ್ಚೆಗೆ ಸಿದ್ಧ. ನರೇಗಾ ವಿಚಾರದಲ್ಲಿ ನನಗೆ ಚರ್ಚೆ ಮಾಡಲು ಯಾವ ತಯಾರಿಯೂ ಬೇಕಾಗಿಲ್ಲ. ಎಲ್ಲಾ ಮಾಹಿತಿಗಳು ನನ್ನ ಬೆರಳ ತುದಿಯಲ್ಲಿವೆ. ಬೇರೆ ಎಲ್ಲೂ ಹೋಗಬೇಕಿಲ್ಲ. ನರೇಗಾ ಯೋಜನೆಯಲ್ಲಿ ನಮ್ಮ ಕನಕಪುರ ತಾಲ್ಲೂಕಿನಲ್ಲಿ ಎಷ್ಟು ಕೆಲಸ ಆಗಿದೆ ಎಂದು ನಮಗೆ ಗೊತ್ತಿದೆ. ನರೇಗಾ ಯೋಜನೆ ಜಾರಿಯಲ್ಲಿ ಕನಕಪುರ ನಂಬರ್ 1 ಎಂದು ಬಿಜೆಪಿಯ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ. ಈ ವಿಚಾರ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿಜಯೇಂದ್ರ ಅವರಿಗೆ ಗೊತ್ತಿದೆಯೋ ಇಲ್ಲವೋ. ನಮ್ಮ ತಾಲ್ಲೂಕಿನಲ್ಲಿ ಅವ್ಯವಹಾರ ಆಗಿದೆಯೇ ಇಲ್ಲವೇ ಎಂದು ಕೇಂದ್ರ ಸರ್ಕಾರ ಹತ್ತು ತಂಡ ಕಳುಹಿಸಿ ತನಿಖೆ ಮಾಡಿಸಿದೆ” ಎಂದು ತಿಳಿಸಿದರು.

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ ನೀಡುತ್ತಾರೆ ಎಂಬ ಬಗ್ಗೆ ಕೇಳಿದಾಗ, “ರಾಜ್ಯ ರಾಜಕಾರಣ ಮಾತ್ರ ಯಾಕೆ ಹಳ್ಳಿಯಿಂದಲೇ ರಾಜಕಾರಣ ಮಾಡಲಿ” ಎಂದು ತಿಳಿದರು.

ಒಕ್ಕಲಿಗ ಉದ್ಯಮಿ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ಯುವ ಒಕ್ಕಲಿಗ ಉದ್ಯಮಿಗಳನ್ನು ಸೇರಿಸಿ ಉತ್ತೇಜನ ನೀಡಲಾಗುತ್ತಿದೆ. ಇಲ್ಲಿ ಉದ್ಯಮಿಗಳು ಪರಸ್ಪರ ಸೇರಿದ್ದಾರೆ. ನಾನು ಇಲ್ಲಿರುವ ಉದ್ಯಮಿಗಳ ಬಗ್ಗೆ ಮಾಹಿತಿ ಪಡೆದೆ.ಅವರು ಬಹಳ ಶ್ರಮ ಪಡುತ್ತಿದ್ದಾರೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ. ಅವರಿಗೆ ಶುಭ ಹಾರೈಸುತ್ತಿದ್ದೇನೆ” ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

9 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

9 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

9 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

9 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

10 hours ago