ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರದ ಜೈಲು ಸೇರಿದ್ದರು ಕೂಡ ಅವರ ಅಭಿಮಾನಿಗಳು ಮಾತ್ರ ದರ್ಶನ್ ಗೆ ಸಪೋರ್ಟ್ ಮಾಡುತ್ತಲೇ ಇದ್ದಾರೆ. ಒಂದು ಕಡೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು ದರ್ಶನ್ ವಿರುದ್ಧ ಒಂದಲ್ಲ ಒಂದು ಸಾಕ್ಷ್ಯಗಳನ್ನಕಲೆ ಹಾಕುತ್ತಲೆ ಇದ್ದಾರೆ. ಮತ್ತೊಂದು ಕಡೆ ದರ್ಶನ್ ನೋಡಬೇಕು ಅಂತಾ ಪ್ರತಿದಿನ ಜೈಲಿನ ಬಳಿ ಬಂದು ಅಭಿಮಾನಿಗಳು ಕಾಯುತ್ತಿದ್ದಾರೆ.
ಈ ಎಲ್ಲದರ ನಡುವೆ ಇದೀಗ ಮತ್ತೊಂದು ಟ್ರೆಂಡ್ ಶುರುವಾಗುತ್ತಿದೆ. ದರ್ಶನ್ ಖೈದಿ ನಂಬರ್ 6106 ಅನ್ನು ಅಭಿಮಾನಿಗಳು ಮೊಬೈಲ್ ಕವರ್ ಆಗಿ ಮಾಡಿಕೊಳ್ಳುತ್ತಿದ್ದಾರೆ. ಬೈಕ್ ಮೇಲೆ , ಕಾರುಗಳ ಮೇಲೆ, ಆಟೋಗಳ ಮೇಲೆ ಖೈದಿ ಸಂಖ್ಯೆಯನ್ನ ಬರೆಸಿಕೊಳ್ಳುತ್ತಿದ್ದ ನೂರಾರು ಅಭಿಮಾನಿಗಳು ಇದೀಗ ಮೊಬೈಲ್ ಕವರ್ ಗೂ ʻಕೈಗೆ ಬೇಡಿ ಹಾಕಿಸಿರುವ ಸ್ಟಿಕ್ಕರ್ ಜೊತೆಗೆ ಖೈದಿ ಸಂಖ್ಯೆʼ ಹಾಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹರಿಬಿಡುತ್ತಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗುತ್ತಿದ್ದು, ಖೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಶುರು ಆಗಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…