ಚಿಕ್ಕಬಳ್ಳಾಪುರ: ಕಾಂಗ್ರೆಸ್ ರಾಷ್ಟ್ರದಲ್ಲಿ 10 ವರ್ಷ ಆಡಳಿತ ನಡೆಸಿ ದೇಶದ ಖಾಜಾನೆಯನ್ನು ಖಾಲಿ ಮಾಡಿ 2014 ರಲ್ಲಿ ಮೋದಿ ಕೈಗೆ ಖಾಲಿ ಚೊಂಬು ನೀಡಿತ್ತು. ಆ ಖಾಲಿ ಚೊಂಬನ್ನು ಪ್ರಧಾನಿ ಅಕ್ಷಯ ಪಾತ್ರೆಯನ್ನಾಗಿಸಿದ್ದಾರೆ ಎಂದು ಮೋದಿಯ ಆಡಳಿತ ವೈಖರಿಯನ್ನು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಶ್ಲಾಘಿಸಿದ್ದಾರೆ.
ತಾಲೂಕಿನ ಚೊಕ್ಕಹಳ್ಳಿ ಬಳಿ ಶನಿವಾರ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ದೇವಗೌಡರು, ಕೇಂದ್ರದಿಂದ ರಾಜ್ಯಕ್ಕೆ ಸಿಕ್ಕಿತ್ತು ಚೊಂಬು ಎಂದು ಕಾಂಗ್ರೆಸ್ ಜಾಹಿರಾತು ನೀಡಿದೆ. ಆದರೆ ಯುಪಿಎ ನೇತೃತ್ವದ ಕಾಂಗ್ರೆಸ್ 2014 ರಲ್ಲಿ ಮೋದಿಗೆ ಕೈಗೆ ಇದೇ ಖಾಲಿ ಚೊಂಬು ನೀಡಿತ್ತು ಎಂದರು.
ಈ ಹತ್ತು ವರ್ಷದಲ್ಲಿ ಆ ಖಾಲಿ ಚೊಂಬನ್ನು ಮೋದಿ ಅಕ್ಷಯ ಪಾತ್ರೆ ಮಾಡಿ ಬಡವರು, ಪರಿಶಿಷ್ಟ ಜಾತಿ, ಹಿಂದುಳಿದವರು, ಸಣ್ಣ ಸಮಾಜದವರನ್ನು ಮೇಲೆತ್ತಿದ್ದರು. ಇಂತವರ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಾತನಾಡುತ್ತಿದ್ದಾರೆ. ಇವರಿಗೆ ನಾಚಿಕೆ ಆಗಬೇಕು. ಇದು ಕ್ಷುಲ್ಲಕ ರಾಜಕಾರಣ ಎಂದು ಟೀಕೀಸಿದರು.
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…