ರಾಜ್ಯ

ಆ.10ರಂದು ಬೆಂಗಳೂರಲ್ಲಿ ಮೋದಿ ರೋಡ್‌ ಶೋ

ಬೆಂಗಳೂರು : ಬಿಬಿಎಂಪಿಯಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಭರ್ಜರಿ ರೋಡ್ ಶೋ ನಡೆಸಲು ಮುಂದಾಗಿದೆ.

ಬಿಜೆಪಿ ಅರ್ಧ ಕಿ.ಮೀ ರೋಡ್ ಶೋ ಕೂಡ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಇನ್ನು ಅಧಿಕೃತವಾಗಿ ರೋಡ್ ಶೋ ಕುರಿತು ಮಾಹಿತಿ ಲಭ್ಯವಾಗಿಲ್ಲವಾದರೂ ಆಗಸ್ಟ್ 10 ರಂದು ಹಳದಿ ಮಾರ್ಗ ಉದ್ಘಾಟನೆಯಾದ ನಂತರ ಮೋದಿ ಅವರು ನಗರದ ಆಯ್ದ ಪ್ರದೇಶದಲ್ಲಿ ರೋಡ್ ಶೋ ನಡೆಸುವ ಸಾಧ್ಯತೆ ಇದೆ. ರಾಜ್ಯ ಬಿಜೆಪಿ ನಾಯಕರು ರೋಡ್ ಶೋ ಬಗ್ಗೆ ಸ್ಥಳಗಳ ಮಾಹಿತಿಯನ್ನು ಪ್ರಧಾನಿ ಕಾರ್ಯಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಿಂದ ದೃಢಪಟ್ಟ ಬಳಿಕ ಇದು ಅಂತಿಮವಾಗಲಿದೆ.

ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗ ವಾಣಿಜ್ಯ ಸಂಚಾರಕ್ಕೆ ಸಜ್ಜಾಗಿದೆ. ಬೊಮ್ಮಸಂದ್ರದಲ್ಲಿ ರೈಲಿಗೆ ಹಸಿರು ನಿಶಾನೆ ತೋರಿಸುವ ಪ್ರಧಾನಿ ಬೊಮ್ಮಸಂದ್ರದಿಂದ ರಾಗಿಗುಡ್ಡ ಮೆಟ್ರೋ ನಿಲ್ದಾಣದವರೆಗೂ ರೈಲಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಯಾಣಿಕರೊಂದಿಗೆ ಅನೌಪಚಾರಿಕವಾಗಿ ಮಾತನಾಡಲಿದ್ದಾರೆ.

ಜಯನಗರದ ರಾಗಿಗುಡ್ಡ ಪ್ರಸನ್ನ ಆಂಜನೇಯ ದೇವಸ್ಥಾನದಿಂದ ಜಯನಗರದ ಶಾಲಿನಿ ಗ್ರೌಂಡ್‌ವರೆಗೆ ಮೋದಿ ರೋಡ್ ಶೋ ನಡೆಸಲು ಬಿಜೆಪಿ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಅವರ ಸ್ವಾಗತ ಹಾಗೂ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಜಯನಗರದ ಶಾಲಿನಿ ಮೈದಾನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ವೇದಿಕೆಗೆ ಭೂಮಿ ಪೂಜೆ ನಡೆಸಿದ್ದಾರೆ.

ಮೆಟ್ರೋ ಉದ್ಘಾಟನೆ, ರೈಲಿನಲ್ಲಿ ಪ್ರಯಾಣ ಹಾಗೂ ರೋಡ್ ಶೋ ಬಳಿಕ ಮಧ್ಯಾಹ್ನ 12 ಗಂಟೆಗೆ ಜಯನಗರದ ಶಾಲಿನಿ ಗ್ರೌಂಡ್ಸ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯುವ ನಿರೀಕ್ಷೆ ಇದೆ. ಐವತ್ತು ಸಾವಿರದಿಂದ ಒಂದೂ ಲಕ್ಷಕ್ಕೂ ಅಽಕ ಮಂದಿ ಸೇರುವ ಸಾಧ್ಯತೆಗಳು ಇವೆ.

ನಮ್ಮ ಮೆಟ್ರೋ ಹಳದಿ ಮಾರ್ಗದ ಮಾಹಿತಿ
ಮಾರ್ಗದ ಉದ್ಧ – 19.15 ಕಿ ಮೀ.
ಮಾರ್ಗದ ವೆಚ್ಚ – ಒಟ್ಟು 5,056,99 ಕೋಟಿ ರೂ.
ಎಲ್ಲಿಂದ ಎಲ್ಲಿಗೆ – ಆರ್.ವಿ.ರಸ್ತೆ – ಬೊಮ್ಮಸಂದ್ರ
ನಿಲ್ದಾಣಗಳ ಸಂಖ್ಯೆ – 16
ಹಸಿರು, ನೀಲಿ ಮಾರ್ಗವನ್ನು ಈ ಹಳದಿ ಮಾರ್ಗ ಸಂಪರ್ಕಿಸುತ್ತದೆ.
ಯೋಜನೆಯ ಫಲಾನುಭವಿಗಳು – ಬೆಂಗಳೂರು ದಕ್ಷಿಣದ ಸುಮಾರು 25 ಲಕ್ಷ ಮಂದಿ
ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಭಾಗಕ್ಕೆ ತೆರಳುವವರಿಗೆ ಭಾರೀ ಅನುಕೂಲ

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

55 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

1 hour ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

2 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

3 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago