ರಾಜ್ಯ

ಆ.10ರಂದು ಬೆಂಗಳೂರಲ್ಲಿ ಮೋದಿ ರೋಡ್‌ ಶೋ

ಬೆಂಗಳೂರು : ಬಿಬಿಎಂಪಿಯಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಭರ್ಜರಿ ರೋಡ್ ಶೋ ನಡೆಸಲು ಮುಂದಾಗಿದೆ.

ಬಿಜೆಪಿ ಅರ್ಧ ಕಿ.ಮೀ ರೋಡ್ ಶೋ ಕೂಡ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಇನ್ನು ಅಧಿಕೃತವಾಗಿ ರೋಡ್ ಶೋ ಕುರಿತು ಮಾಹಿತಿ ಲಭ್ಯವಾಗಿಲ್ಲವಾದರೂ ಆಗಸ್ಟ್ 10 ರಂದು ಹಳದಿ ಮಾರ್ಗ ಉದ್ಘಾಟನೆಯಾದ ನಂತರ ಮೋದಿ ಅವರು ನಗರದ ಆಯ್ದ ಪ್ರದೇಶದಲ್ಲಿ ರೋಡ್ ಶೋ ನಡೆಸುವ ಸಾಧ್ಯತೆ ಇದೆ. ರಾಜ್ಯ ಬಿಜೆಪಿ ನಾಯಕರು ರೋಡ್ ಶೋ ಬಗ್ಗೆ ಸ್ಥಳಗಳ ಮಾಹಿತಿಯನ್ನು ಪ್ರಧಾನಿ ಕಾರ್ಯಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಿಂದ ದೃಢಪಟ್ಟ ಬಳಿಕ ಇದು ಅಂತಿಮವಾಗಲಿದೆ.

ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗ ವಾಣಿಜ್ಯ ಸಂಚಾರಕ್ಕೆ ಸಜ್ಜಾಗಿದೆ. ಬೊಮ್ಮಸಂದ್ರದಲ್ಲಿ ರೈಲಿಗೆ ಹಸಿರು ನಿಶಾನೆ ತೋರಿಸುವ ಪ್ರಧಾನಿ ಬೊಮ್ಮಸಂದ್ರದಿಂದ ರಾಗಿಗುಡ್ಡ ಮೆಟ್ರೋ ನಿಲ್ದಾಣದವರೆಗೂ ರೈಲಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಯಾಣಿಕರೊಂದಿಗೆ ಅನೌಪಚಾರಿಕವಾಗಿ ಮಾತನಾಡಲಿದ್ದಾರೆ.

ಜಯನಗರದ ರಾಗಿಗುಡ್ಡ ಪ್ರಸನ್ನ ಆಂಜನೇಯ ದೇವಸ್ಥಾನದಿಂದ ಜಯನಗರದ ಶಾಲಿನಿ ಗ್ರೌಂಡ್‌ವರೆಗೆ ಮೋದಿ ರೋಡ್ ಶೋ ನಡೆಸಲು ಬಿಜೆಪಿ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಅವರ ಸ್ವಾಗತ ಹಾಗೂ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಜಯನಗರದ ಶಾಲಿನಿ ಮೈದಾನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ವೇದಿಕೆಗೆ ಭೂಮಿ ಪೂಜೆ ನಡೆಸಿದ್ದಾರೆ.

ಮೆಟ್ರೋ ಉದ್ಘಾಟನೆ, ರೈಲಿನಲ್ಲಿ ಪ್ರಯಾಣ ಹಾಗೂ ರೋಡ್ ಶೋ ಬಳಿಕ ಮಧ್ಯಾಹ್ನ 12 ಗಂಟೆಗೆ ಜಯನಗರದ ಶಾಲಿನಿ ಗ್ರೌಂಡ್ಸ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯುವ ನಿರೀಕ್ಷೆ ಇದೆ. ಐವತ್ತು ಸಾವಿರದಿಂದ ಒಂದೂ ಲಕ್ಷಕ್ಕೂ ಅಽಕ ಮಂದಿ ಸೇರುವ ಸಾಧ್ಯತೆಗಳು ಇವೆ.

ನಮ್ಮ ಮೆಟ್ರೋ ಹಳದಿ ಮಾರ್ಗದ ಮಾಹಿತಿ
ಮಾರ್ಗದ ಉದ್ಧ – 19.15 ಕಿ ಮೀ.
ಮಾರ್ಗದ ವೆಚ್ಚ – ಒಟ್ಟು 5,056,99 ಕೋಟಿ ರೂ.
ಎಲ್ಲಿಂದ ಎಲ್ಲಿಗೆ – ಆರ್.ವಿ.ರಸ್ತೆ – ಬೊಮ್ಮಸಂದ್ರ
ನಿಲ್ದಾಣಗಳ ಸಂಖ್ಯೆ – 16
ಹಸಿರು, ನೀಲಿ ಮಾರ್ಗವನ್ನು ಈ ಹಳದಿ ಮಾರ್ಗ ಸಂಪರ್ಕಿಸುತ್ತದೆ.
ಯೋಜನೆಯ ಫಲಾನುಭವಿಗಳು – ಬೆಂಗಳೂರು ದಕ್ಷಿಣದ ಸುಮಾರು 25 ಲಕ್ಷ ಮಂದಿ
ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಭಾಗಕ್ಕೆ ತೆರಳುವವರಿಗೆ ಭಾರೀ ಅನುಕೂಲ

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

3 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago