ರಾಜ್ಯ

ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ: ಸಿ.ಎಂ.ಸಿದ್ದರಾಮಯ್ಯ

  • ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ?
  • ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆಕಾಳು, ಅಡುಗೆ ಎಣ್ಣೆ ಬೆಲೆ ಎಷ್ಟಿತ್ತು?ಈಗ ಎಷ್ಟಾಗಿದೆ?
  • ಈಗ ಹೇಳಿ, ನಾಲಾಯಕ್ ಗೆ ಕೊಟ್ಟ ನಿಮ್ಮ ಮತ ಏನಾಯ್ತು?

ಕೋಲಾರ : ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಕೋಲಾರ (ಶಿಡ್ಳಘಟ್ಟ)ದ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಯಾಚಿಸಿ ಈ ರೀತಿ ಪ್ರಶ್ನಿಸಿದರು.

ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ.

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ಮೋದಿ ಮಾತನ್ನು ನಂಬಿ ಯುವ ಸಮೂಹ ಮೋದಿಯವರಿಗೆ ಮತ ಹಾಕಿದ್ರು.

ಹೀಗೆ ಮತ ಹಾಕಿದವರೆಲ್ಲಾ ಡಿಗ್ರಿ ಮುಗಿಸಿದ ಮೇಲೆ ಕೆಲ್ಸ ಕೊಡಿ ಎಂದು ಕೇಳಿದರೆ, “ಹೋಗಿ ಪಕೋಡ ಮಾರಾಟ ಮಾಡಿ” ಅಂದ್ರು.

ಇದು ದೇಶದ ಯುವ ಸಮೂಹಕ್ಕೆ ಮಾಡಿದ ಮಹಾದ್ರೋಹ ಅಲ್ಲವೇ? ಮಹಾನ್ ನಂಬಿಕೆ ದ್ರೋಹ ಅಲ್ಲವೇ? ಪಕೋಡ ಮಾರೋದನ್ನು ಹೇಳಿಕೊಡೋಕೆ ಇವರು ಪ್ರಧಾನಿ ಆಗಬೇಕಿತ್ತಾ? ಎಂದು ಪ್ರಶ್ನಿಸಿದರು.‌

ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ? ಹತ್ತತ್ತು ವರ್ಷ ಮತ ಹಾಕಿದ್ರಲ್ಲಾ ನಿಮಗೆ, ದೇಶಕ್ಕೆ ಏನಾದ್ರೂ ಸಿಕ್ಕಿತಾ ? ಈ ಹತ್ತು ವರ್ಷದಲ್ಲಿ ಏನೇನೂ ಕೊಡದವರು ಈ ಬಾರಿ ನಿಮ್ಮ ಮತ ಕೇಳುತ್ತಿದ್ದಾರೆ, ಹೀಗೆ ಮತ ಕೇಳುವ ಯೋಗ್ಯತೆಯಾಗಲೀ, ಅರ್ಹತೆಯಾಗಲೀ BJP ಯವರಿಗೆ ಇದೆಯೇ ಎಂದು ಪ್ರಶ್ನಿಸಿದರು.

ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆಕಾಳು, ಅಡುಗೆ ಎಣ್ಣೆ ಬೆಲೆ ಎಷ್ಟಿತ್ತು?ಈಗ ಎಷ್ಟಾಗಿದೆ?‌

ನಾವು ನುಡಿದಂತೆ ನಡೆದಿದ್ದೇವೆ. ಪ್ರತಿ ಕುಟುಂಬಗಳ ಜೇಬಿಗೆ ಪ್ರತಿ ತಿಂಗಳು 4 ರಿಂದ 6 ಸಾವಿರ ರೂಪಾಯಿ ಹಾಕುತ್ತಿದ್ದೇವೆ. ನಾವು ನುಡಿದಂತೆ ನಡೆದು ಬಂದು ಓಟು ಕೇಳುತ್ತಿದ್ದೇವೆ.

ನಮಗೆ ಮತ ನೀಡಿ. ನಿಮ್ಮ ಮತಕ್ಕೆ ಗೌರವ ಕೊಟ್ಟು ಅಭಿವೃದ್ಧಿಯ ಲಾಭ ನಿಮ್ಮ ಜೇಬಿಗೆ, ನಿಮ್ಮ ಖಾತೆಗೆ ಹಾಕುವ ಕೆಲಸವನ್ಮು ನಾವು ಮಾಡ್ತೇವೆ ಎಂದು ಘೋಷಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

1 min ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

7 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

15 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

21 mins ago