ರಾಜ್ಯ

ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ: ಸಿ.ಎಂ.ಸಿದ್ದರಾಮಯ್ಯ

  • ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ?
  • ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆಕಾಳು, ಅಡುಗೆ ಎಣ್ಣೆ ಬೆಲೆ ಎಷ್ಟಿತ್ತು?ಈಗ ಎಷ್ಟಾಗಿದೆ?
  • ಈಗ ಹೇಳಿ, ನಾಲಾಯಕ್ ಗೆ ಕೊಟ್ಟ ನಿಮ್ಮ ಮತ ಏನಾಯ್ತು?

ಕೋಲಾರ : ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಕೋಲಾರ (ಶಿಡ್ಳಘಟ್ಟ)ದ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಯಾಚಿಸಿ ಈ ರೀತಿ ಪ್ರಶ್ನಿಸಿದರು.

ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ.

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ಮೋದಿ ಮಾತನ್ನು ನಂಬಿ ಯುವ ಸಮೂಹ ಮೋದಿಯವರಿಗೆ ಮತ ಹಾಕಿದ್ರು.

ಹೀಗೆ ಮತ ಹಾಕಿದವರೆಲ್ಲಾ ಡಿಗ್ರಿ ಮುಗಿಸಿದ ಮೇಲೆ ಕೆಲ್ಸ ಕೊಡಿ ಎಂದು ಕೇಳಿದರೆ, “ಹೋಗಿ ಪಕೋಡ ಮಾರಾಟ ಮಾಡಿ” ಅಂದ್ರು.

ಇದು ದೇಶದ ಯುವ ಸಮೂಹಕ್ಕೆ ಮಾಡಿದ ಮಹಾದ್ರೋಹ ಅಲ್ಲವೇ? ಮಹಾನ್ ನಂಬಿಕೆ ದ್ರೋಹ ಅಲ್ಲವೇ? ಪಕೋಡ ಮಾರೋದನ್ನು ಹೇಳಿಕೊಡೋಕೆ ಇವರು ಪ್ರಧಾನಿ ಆಗಬೇಕಿತ್ತಾ? ಎಂದು ಪ್ರಶ್ನಿಸಿದರು.‌

ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ? ಹತ್ತತ್ತು ವರ್ಷ ಮತ ಹಾಕಿದ್ರಲ್ಲಾ ನಿಮಗೆ, ದೇಶಕ್ಕೆ ಏನಾದ್ರೂ ಸಿಕ್ಕಿತಾ ? ಈ ಹತ್ತು ವರ್ಷದಲ್ಲಿ ಏನೇನೂ ಕೊಡದವರು ಈ ಬಾರಿ ನಿಮ್ಮ ಮತ ಕೇಳುತ್ತಿದ್ದಾರೆ, ಹೀಗೆ ಮತ ಕೇಳುವ ಯೋಗ್ಯತೆಯಾಗಲೀ, ಅರ್ಹತೆಯಾಗಲೀ BJP ಯವರಿಗೆ ಇದೆಯೇ ಎಂದು ಪ್ರಶ್ನಿಸಿದರು.

ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆಕಾಳು, ಅಡುಗೆ ಎಣ್ಣೆ ಬೆಲೆ ಎಷ್ಟಿತ್ತು?ಈಗ ಎಷ್ಟಾಗಿದೆ?‌

ನಾವು ನುಡಿದಂತೆ ನಡೆದಿದ್ದೇವೆ. ಪ್ರತಿ ಕುಟುಂಬಗಳ ಜೇಬಿಗೆ ಪ್ರತಿ ತಿಂಗಳು 4 ರಿಂದ 6 ಸಾವಿರ ರೂಪಾಯಿ ಹಾಕುತ್ತಿದ್ದೇವೆ. ನಾವು ನುಡಿದಂತೆ ನಡೆದು ಬಂದು ಓಟು ಕೇಳುತ್ತಿದ್ದೇವೆ.

ನಮಗೆ ಮತ ನೀಡಿ. ನಿಮ್ಮ ಮತಕ್ಕೆ ಗೌರವ ಕೊಟ್ಟು ಅಭಿವೃದ್ಧಿಯ ಲಾಭ ನಿಮ್ಮ ಜೇಬಿಗೆ, ನಿಮ್ಮ ಖಾತೆಗೆ ಹಾಕುವ ಕೆಲಸವನ್ಮು ನಾವು ಮಾಡ್ತೇವೆ ಎಂದು ಘೋಷಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

9 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

9 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

10 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

10 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

10 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

12 hours ago