ರಾಜ್ಯ

ಮೋದಿ ಅವರೇ, ಹಿಂದೂಗಳಿಗೆ ಯುಗಾದಿ ಕಿಟ್ ಯಾವಾಗ ಕೊಡ್ತೀರಾ?: ರಾಮಲಿಂಗಾ ರೆಡ್ಡಿ ಪ್ರಶ್ನೆ

ಬೆಂಗಳೂರು: ಮುಸ್ಲಿಮರಿಗೆ ರಂಜಾನ್ ಕಿಟ್ ಘೋಷಣೆ ಮಾಡಿರುವ ಮೋದಿ ಅವ್ರೇ, ಹಿಂದೂಗಳಿಗೆ ಯುಗಾದಿ ಕಿಟ್ ಯಾವಾಗ ಕೊಡ್ತೀರೀ? ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ.

ಸದಾ ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮುಸ್ಲಿಮರಿಗೆ ರಂಜಾನ್ ಕಿಟ್ ಕೊಟ್ಟಿರುವುದಕ್ಕೆ ಸ್ವಾಗತ. ಅದೇ ರೀತಿ ದೇಶದಲ್ಲಿರುವ ಎಲ್ಲ ಹಿಂದೂಗಳು ಯುಗಾದಿ ಕಿಟ್ ನಿರೀಕ್ಷೆಯಲ್ಲಿದ್ದಾರೆ. ನೀವು ಆದಷ್ಟು ಬೇಗ ಯುಗಾದಿ ಕಿಟ್ ಘೋಷಣೆ ಮಾಡಿ ಬಹುಸಂಖ್ಯಾತ ಹಿಂದೂಗಳ ಹಬ್ಬದ ಸಂಭ್ರಮವನ್ನು ಹೆಚ್ಚಿಸಿ ಎಂದು ಸಲಹೆ ನೀಡಿದ್ದಾರೆ.

ಧರ್ಮದ ಆಧಾರದಲ್ಲಿ ಚುನಾವಣೆ ಎದುರಿಸುತ್ತಾ ಮುಸ್ಲಿಂ ದ್ವೇಷ ಕಾರುವ ಬಿಜೆಪಿ, ಈಗ ಕಿಟ್ ಕೊಟ್ಟು ಮುಸ್ಲಿಮರ ಓಲೈಕೆಗೆ ಮುಂದಾಗಿದೆ. ಅದೇ ರಾಜ್ಯದಲ್ಲಿ ಬಿಜೆಪಿ ನಾಯಕರು ರಾಜ್ಯ ಬಜೆಟ್ ಅನ್ನು ಹಲಾಲ್ ಬಜೆಟ್ ಎಂದು ಟೀಕೆ ಮಾಡ್ತಾರೆ. ಇಂತಹ ಡಬಲ್ ಸ್ಟಾಂಡರ್ಡ್ ಮನಸ್ಥಿತಿಯನ್ನು ಬಿಜೆಪಿ ನಾಯಕರು ಬಿಟ್ಟರೆ ಒಳ್ಳೆಯದು ಎಂದಿದ್ದಾರೆ.

ನಮ್ಮ ಸರ್ಕಾರ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರು ಎಲ್ಲರ ಪರವಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ನಮ್ಮ ಯೋಜನೆಗಳನ್ನು ಟೀಕೆ ಮಾಡ್ತಾರೆ. ಆದರೆ, ಒಂದು ಕಡೆ ಮುಸ್ಲಿಂ ದ್ವೇಷ ಹರಡುತ್ತಾರೆ. ಮತ್ತೊಂದು ಕಡೆ ಓಲೈಕೆ ಮಾಡ್ತಾರೆ. ಇಂತಹ ದ್ವಂದ್ವ ನೀತಿಯನ್ನು ಬಿಜೆಪಿ ದೇಶದಲ್ಲಿ ಬಿತ್ತುತ್ತಿದೆ ಎಂದು ಆರೋಪಿಸಿದ್ದಾರೆ.

ಮುಸ್ಲಿಮರಿಗೆ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ಮೋದಿ ಅವರು, ರಾಜ್ಯದ ಬಿಜೆಪಿ ನಾಯಕರಿಗೆ ಮುಸ್ಲಿಂ ದ್ವೇಷ ಬಿಡುವಂತೆ ಸಲಹೆ ನೀಡಲಿ, ಹಲಾಲ್ ಬಜೆಟ್ ಎಂದಿದ್ದಕ್ಕೆ ಬಿಜೆಪಿ ನಾಯಕರು ಕ್ಷಮೆ ಕೋರುವಂತೆ ಸೂಚನೆ ನೀಡಲಿ, ಹಾಗೆಯೇ ಹಿಂದೂಗಳಿಗೂ ಯುಗಾದಿ ಕಿಟ್ ಘೋಷಿಸಿ, ಹಿಂದೂಗಳು ಖುಷಿಯಿಂದ ಹಬ್ಬ ಆಚರಿಸುವಂತೆ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ನರೇಂದ್ರ ಮೋದಿ ಅವರೇ, ನೀವು 2024 ರ ಲೋಕಸಭೆ ವೇಳೆ ಮಟನ್, ಮೊಘಲ್, ಮಂಗಳಸೂತ್ರ ಮತ್ತು ಮುಜ್ರಾ ಎಂಬುವ ಮೂಲಕ ಕೋಮುದ್ವೇಷ ಹರಡಿದ್ದನ್ನು ದೇಶದ ಜನತೆ ಮರೆತಿಲ್ಲ. ಮಾಂಸ ತಿನ್ನುವ ಬಹುಸಂಖ್ಯಾತ ಭಾರತೀಯರನ್ನು ಅವಮಾನಿಸಿ, ಎದುರಾಳಿ ಪಕ್ಷದವರನ್ನು ಮೊಘಲರ ಜತೆಗೆ ಹೋಲಿಕೆ ಮಾಡಿ, ಮುಸ್ಲಿಮರು ನಿಮ್ಮ ಮಂಗಳಸೂತ್ರವನ್ನು ಕಿತ್ತುಕೊಳ್ಳುತ್ತಾರೆ ಎಂಬ ಭಯವನ್ನು ಬಿತ್ತಿ, ಮುಜ್ರಾ ಮೂಲಕ ದಲಿತ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲೀಮರಿಗೆ ಕೊಡುತ್ತಾರೆ ಎಂದು ಸುಳ್ಳು ಹೇಳಿ ಗೆದ್ದಿರಿ. ಈಗ ಅದೇ ವರ್ಗದ ಓಲೈಕೆಗೆ ಕಿಟ್ ಕೊಡುತ್ತಿದ್ದೀರಿ, ಅದೇ ರೀತಿ ನಿಮ್ಮನ್ನು ನಂಬಿದ ಹಿಂದೂಗಳಿಗೂ ಯುಗಾದಿ ಹಬ್ಬಕ್ಕೆ ಕಿಟ್ ಕೊಡಿಸುವ ವ್ಯವಸ್ಥೆ ಮಾಡಿಸಿ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಕಾವೇರಿ ನದಿ ದಾಟಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಿದ ಭಕ್ತರು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…

33 mins ago

ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ ಬಾಲಕನ ಮೇಲೆ ಚಿರತೆ ದಾಳಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…

1 hour ago

ನಾನು, ಸಿಎಂ ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

2 hours ago

ಫೆಬ್ರವರಿ.12ರಂದು ರಾಜ್ಯಾದ್ಯಂತ ಬಿಸಿಯೂಟ ನೌಕರರ ಮುಷ್ಕರ

ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…

2 hours ago

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮನೆ ಜಗುಲಿಯಲ್ಲೇ ಶವ ಪತ್ತೆ

ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…

2 hours ago

ಮೈಸೂರಿನಲ್ಲಿ ಫೆಬ್ರವರಿ.14ರಂದು ಹನುಮಾನ್ ಚಾಲೀಸಾ ಪಾರಾಯಣ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ.…

3 hours ago