ರಾಜ್ಯ

ಮೋದಿ ಅವರೇ, ಹಿಂದೂಗಳಿಗೆ ಯುಗಾದಿ ಕಿಟ್ ಯಾವಾಗ ಕೊಡ್ತೀರಾ?: ರಾಮಲಿಂಗಾ ರೆಡ್ಡಿ ಪ್ರಶ್ನೆ

ಬೆಂಗಳೂರು: ಮುಸ್ಲಿಮರಿಗೆ ರಂಜಾನ್ ಕಿಟ್ ಘೋಷಣೆ ಮಾಡಿರುವ ಮೋದಿ ಅವ್ರೇ, ಹಿಂದೂಗಳಿಗೆ ಯುಗಾದಿ ಕಿಟ್ ಯಾವಾಗ ಕೊಡ್ತೀರೀ? ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ.

ಸದಾ ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮುಸ್ಲಿಮರಿಗೆ ರಂಜಾನ್ ಕಿಟ್ ಕೊಟ್ಟಿರುವುದಕ್ಕೆ ಸ್ವಾಗತ. ಅದೇ ರೀತಿ ದೇಶದಲ್ಲಿರುವ ಎಲ್ಲ ಹಿಂದೂಗಳು ಯುಗಾದಿ ಕಿಟ್ ನಿರೀಕ್ಷೆಯಲ್ಲಿದ್ದಾರೆ. ನೀವು ಆದಷ್ಟು ಬೇಗ ಯುಗಾದಿ ಕಿಟ್ ಘೋಷಣೆ ಮಾಡಿ ಬಹುಸಂಖ್ಯಾತ ಹಿಂದೂಗಳ ಹಬ್ಬದ ಸಂಭ್ರಮವನ್ನು ಹೆಚ್ಚಿಸಿ ಎಂದು ಸಲಹೆ ನೀಡಿದ್ದಾರೆ.

ಧರ್ಮದ ಆಧಾರದಲ್ಲಿ ಚುನಾವಣೆ ಎದುರಿಸುತ್ತಾ ಮುಸ್ಲಿಂ ದ್ವೇಷ ಕಾರುವ ಬಿಜೆಪಿ, ಈಗ ಕಿಟ್ ಕೊಟ್ಟು ಮುಸ್ಲಿಮರ ಓಲೈಕೆಗೆ ಮುಂದಾಗಿದೆ. ಅದೇ ರಾಜ್ಯದಲ್ಲಿ ಬಿಜೆಪಿ ನಾಯಕರು ರಾಜ್ಯ ಬಜೆಟ್ ಅನ್ನು ಹಲಾಲ್ ಬಜೆಟ್ ಎಂದು ಟೀಕೆ ಮಾಡ್ತಾರೆ. ಇಂತಹ ಡಬಲ್ ಸ್ಟಾಂಡರ್ಡ್ ಮನಸ್ಥಿತಿಯನ್ನು ಬಿಜೆಪಿ ನಾಯಕರು ಬಿಟ್ಟರೆ ಒಳ್ಳೆಯದು ಎಂದಿದ್ದಾರೆ.

ನಮ್ಮ ಸರ್ಕಾರ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರು ಎಲ್ಲರ ಪರವಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ನಮ್ಮ ಯೋಜನೆಗಳನ್ನು ಟೀಕೆ ಮಾಡ್ತಾರೆ. ಆದರೆ, ಒಂದು ಕಡೆ ಮುಸ್ಲಿಂ ದ್ವೇಷ ಹರಡುತ್ತಾರೆ. ಮತ್ತೊಂದು ಕಡೆ ಓಲೈಕೆ ಮಾಡ್ತಾರೆ. ಇಂತಹ ದ್ವಂದ್ವ ನೀತಿಯನ್ನು ಬಿಜೆಪಿ ದೇಶದಲ್ಲಿ ಬಿತ್ತುತ್ತಿದೆ ಎಂದು ಆರೋಪಿಸಿದ್ದಾರೆ.

ಮುಸ್ಲಿಮರಿಗೆ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ಮೋದಿ ಅವರು, ರಾಜ್ಯದ ಬಿಜೆಪಿ ನಾಯಕರಿಗೆ ಮುಸ್ಲಿಂ ದ್ವೇಷ ಬಿಡುವಂತೆ ಸಲಹೆ ನೀಡಲಿ, ಹಲಾಲ್ ಬಜೆಟ್ ಎಂದಿದ್ದಕ್ಕೆ ಬಿಜೆಪಿ ನಾಯಕರು ಕ್ಷಮೆ ಕೋರುವಂತೆ ಸೂಚನೆ ನೀಡಲಿ, ಹಾಗೆಯೇ ಹಿಂದೂಗಳಿಗೂ ಯುಗಾದಿ ಕಿಟ್ ಘೋಷಿಸಿ, ಹಿಂದೂಗಳು ಖುಷಿಯಿಂದ ಹಬ್ಬ ಆಚರಿಸುವಂತೆ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ನರೇಂದ್ರ ಮೋದಿ ಅವರೇ, ನೀವು 2024 ರ ಲೋಕಸಭೆ ವೇಳೆ ಮಟನ್, ಮೊಘಲ್, ಮಂಗಳಸೂತ್ರ ಮತ್ತು ಮುಜ್ರಾ ಎಂಬುವ ಮೂಲಕ ಕೋಮುದ್ವೇಷ ಹರಡಿದ್ದನ್ನು ದೇಶದ ಜನತೆ ಮರೆತಿಲ್ಲ. ಮಾಂಸ ತಿನ್ನುವ ಬಹುಸಂಖ್ಯಾತ ಭಾರತೀಯರನ್ನು ಅವಮಾನಿಸಿ, ಎದುರಾಳಿ ಪಕ್ಷದವರನ್ನು ಮೊಘಲರ ಜತೆಗೆ ಹೋಲಿಕೆ ಮಾಡಿ, ಮುಸ್ಲಿಮರು ನಿಮ್ಮ ಮಂಗಳಸೂತ್ರವನ್ನು ಕಿತ್ತುಕೊಳ್ಳುತ್ತಾರೆ ಎಂಬ ಭಯವನ್ನು ಬಿತ್ತಿ, ಮುಜ್ರಾ ಮೂಲಕ ದಲಿತ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲೀಮರಿಗೆ ಕೊಡುತ್ತಾರೆ ಎಂದು ಸುಳ್ಳು ಹೇಳಿ ಗೆದ್ದಿರಿ. ಈಗ ಅದೇ ವರ್ಗದ ಓಲೈಕೆಗೆ ಕಿಟ್ ಕೊಡುತ್ತಿದ್ದೀರಿ, ಅದೇ ರೀತಿ ನಿಮ್ಮನ್ನು ನಂಬಿದ ಹಿಂದೂಗಳಿಗೂ ಯುಗಾದಿ ಹಬ್ಬಕ್ಕೆ ಕಿಟ್ ಕೊಡಿಸುವ ವ್ಯವಸ್ಥೆ ಮಾಡಿಸಿ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

22 mins ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

33 mins ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

10 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

13 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

13 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

14 hours ago