ರಾಜ್ಯ

ಅಂಬೇಡ್ಕರ್‌ ಅವರ ಆಶಯವನ್ನು ಮೋದಿಜೀ ನೆರವೇರಿಸುತ್ತಿದ್ದಾರೆ: ಬಿವೈ ವಿಜಯೇಂದ್ರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಮತ ಬ್ಯಾಂಕ್‌ ರಾಜಕಾರಣವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಬಾಬಾ ಸಾಹೇಬರ ಆಶಯವನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಇಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಎಸ್‌ಸಿ ಮೋರ್ಚಾ ವತಿಯಿಂದ ಆಯೋಜಿಸಲಾಗಿದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನೆಹರೂ ಸ್ಮಾರಕಕ್ಕೆ ೩೦ ಎಕರೆ, ಇಂದಿರಾ ಗಾಂಧಿ ಸ್ಮಾರಕಕ್ಕೆ ೨೦ ಎಕರೆ ಜಾಗ ನೀಡಿದ ಕಾಂಗ್ರೆಸ್‌ ಸರ್ಕಾರ ಅಂಬೇಡ್ಕರ್‌ ಅವರ ಹೆಸರನ್ನು ನುಡಿ ಮುತ್ತಾಗಿ ಬಳಸುವ ಅವರು, ಗೌರವಯುತವಾಗಿ ಅಂಬೇಡ್ಕರ್‌ ಅವರ ಅಂತ್ಯ ಸಂಸ್ಕಾರವನ್ನು ಮಾಡಲು ಬಿಡಲಿಲ್ಲ. ಅಂತಹ ಪಕ್ಷಕ್ಕೆ ಅಂಬೇಡ್ಕರ್‌ ಹೆಸರು ಹೇಳುವ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದರು.

ನೆಹರು, ಇಂದಿರಾ ಗಾಂಧಿ ಅವರ ರಾಷ್ಟ್ರೀಯ ಸ್ಮಾರಕಕ್ಕೆ ಜಾಗ ನೀಡಿದ ಕಾಂಗ್ರೆಸ್‌ ಬಾಬಾ ಸಾಹೇಬರಿಗೆ ಯಾಕೆ ನೀಡಲಿಲ್ಲ. ಅಂದು ಅವರಿಗೆ ಅಂಬೇಡ್ಕರ್‌ ನೆನಪಾಗಲಿಲ್ಲವೇ, ಮೊದಿ ಅವರು ಅಧಿಕಾರಕ್ಕೆ ಬಂದು ಬಾಬಾ ಸಾಹೇಬರ್‌ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದೆ. ಆದರೆ ಕಾಂಗ್ರೆಸ್‌ ನೆಹರು ಕುಟುಂಬದ ಕಟ್ಟ ಕಡೆಯ ವ್ಯಕ್ತಿಗೂ ಅಧಿಕಾರ ಕೊಡುವ ಕಡೆ ಗಮನ ನೀಡಿದೆ. ಇಂತಹವರಿಂದ ಬಿಜೆಪಿ ಪಕ್ಷ ಅಂಬೇಡ್ಕರರ ಬಗ್ಗೆ ತಿಳಿದುಕೊಳ್ಳಬೇಕಿಲ್ಲ ಎಂದು ಕಿಡಿಕಾರಿದರು.

ದೇಶದ ಸಂವಿಧಾನ ಈ ರಾಷ್ಟ್ರದ ಸಾಮಾಜಿಕ ಸಾಂಸ್ಕತಿಕ ವೈವಿಧ್ಯತೆ ಮತ್ತು ಸಂಕೀರ್ಣತೆಯನ್ನು ಪ್ರತಿಬಿಂಬಿಸುವ ವಿಶ್ವದ ಅತಿ ಉದ್ದವಾದ ಲಿಖಿತ ಸಂವಿಧಾನ ಎಂದು ಹೆಸರಾಗಿದೆ. ಭಾರತದ ಸಂವಿಧಾನವು ಪ್ರಜಾಪ್ರಭುತ್ವ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯ ತತ್ವಗಳನ್ನು ಪ್ರತಿಪಾದಿಸುತ್ತದೆ. ಇದುವೇ ನಮ್ಮ ದೇಶದ ಆಡಳಿತ ವ್ಯವಸ್ಥೆಯ ತಳಹದಿ ಎಂದು ತಿಳಿಸಿದರು.

andolanait

Recent Posts

ಇರಾನ್‌ನ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

9 mins ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

44 mins ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

1 hour ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

2 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

2 hours ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

3 hours ago