ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಮತ ಬ್ಯಾಂಕ್ ರಾಜಕಾರಣವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಬಾಬಾ ಸಾಹೇಬರ ಆಶಯವನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಇಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಎಸ್ಸಿ ಮೋರ್ಚಾ ವತಿಯಿಂದ ಆಯೋಜಿಸಲಾಗಿದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನೆಹರೂ ಸ್ಮಾರಕಕ್ಕೆ ೩೦ ಎಕರೆ, ಇಂದಿರಾ ಗಾಂಧಿ ಸ್ಮಾರಕಕ್ಕೆ ೨೦ ಎಕರೆ ಜಾಗ ನೀಡಿದ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಅವರ ಹೆಸರನ್ನು ನುಡಿ ಮುತ್ತಾಗಿ ಬಳಸುವ ಅವರು, ಗೌರವಯುತವಾಗಿ ಅಂಬೇಡ್ಕರ್ ಅವರ ಅಂತ್ಯ ಸಂಸ್ಕಾರವನ್ನು ಮಾಡಲು ಬಿಡಲಿಲ್ಲ. ಅಂತಹ ಪಕ್ಷಕ್ಕೆ ಅಂಬೇಡ್ಕರ್ ಹೆಸರು ಹೇಳುವ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದರು.
ನೆಹರು, ಇಂದಿರಾ ಗಾಂಧಿ ಅವರ ರಾಷ್ಟ್ರೀಯ ಸ್ಮಾರಕಕ್ಕೆ ಜಾಗ ನೀಡಿದ ಕಾಂಗ್ರೆಸ್ ಬಾಬಾ ಸಾಹೇಬರಿಗೆ ಯಾಕೆ ನೀಡಲಿಲ್ಲ. ಅಂದು ಅವರಿಗೆ ಅಂಬೇಡ್ಕರ್ ನೆನಪಾಗಲಿಲ್ಲವೇ, ಮೊದಿ ಅವರು ಅಧಿಕಾರಕ್ಕೆ ಬಂದು ಬಾಬಾ ಸಾಹೇಬರ್ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದೆ. ಆದರೆ ಕಾಂಗ್ರೆಸ್ ನೆಹರು ಕುಟುಂಬದ ಕಟ್ಟ ಕಡೆಯ ವ್ಯಕ್ತಿಗೂ ಅಧಿಕಾರ ಕೊಡುವ ಕಡೆ ಗಮನ ನೀಡಿದೆ. ಇಂತಹವರಿಂದ ಬಿಜೆಪಿ ಪಕ್ಷ ಅಂಬೇಡ್ಕರರ ಬಗ್ಗೆ ತಿಳಿದುಕೊಳ್ಳಬೇಕಿಲ್ಲ ಎಂದು ಕಿಡಿಕಾರಿದರು.
ದೇಶದ ಸಂವಿಧಾನ ಈ ರಾಷ್ಟ್ರದ ಸಾಮಾಜಿಕ ಸಾಂಸ್ಕತಿಕ ವೈವಿಧ್ಯತೆ ಮತ್ತು ಸಂಕೀರ್ಣತೆಯನ್ನು ಪ್ರತಿಬಿಂಬಿಸುವ ವಿಶ್ವದ ಅತಿ ಉದ್ದವಾದ ಲಿಖಿತ ಸಂವಿಧಾನ ಎಂದು ಹೆಸರಾಗಿದೆ. ಭಾರತದ ಸಂವಿಧಾನವು ಪ್ರಜಾಪ್ರಭುತ್ವ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯ ತತ್ವಗಳನ್ನು ಪ್ರತಿಪಾದಿಸುತ್ತದೆ. ಇದುವೇ ನಮ್ಮ ದೇಶದ ಆಡಳಿತ ವ್ಯವಸ್ಥೆಯ ತಳಹದಿ ಎಂದು ತಿಳಿಸಿದರು.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…