ರಾಜ್ಯ

ಅಂಬೇಡ್ಕರ್‌ ಅವರ ಆಶಯವನ್ನು ಮೋದಿಜೀ ನೆರವೇರಿಸುತ್ತಿದ್ದಾರೆ: ಬಿವೈ ವಿಜಯೇಂದ್ರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಮತ ಬ್ಯಾಂಕ್‌ ರಾಜಕಾರಣವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಬಾಬಾ ಸಾಹೇಬರ ಆಶಯವನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಇಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಎಸ್‌ಸಿ ಮೋರ್ಚಾ ವತಿಯಿಂದ ಆಯೋಜಿಸಲಾಗಿದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನೆಹರೂ ಸ್ಮಾರಕಕ್ಕೆ ೩೦ ಎಕರೆ, ಇಂದಿರಾ ಗಾಂಧಿ ಸ್ಮಾರಕಕ್ಕೆ ೨೦ ಎಕರೆ ಜಾಗ ನೀಡಿದ ಕಾಂಗ್ರೆಸ್‌ ಸರ್ಕಾರ ಅಂಬೇಡ್ಕರ್‌ ಅವರ ಹೆಸರನ್ನು ನುಡಿ ಮುತ್ತಾಗಿ ಬಳಸುವ ಅವರು, ಗೌರವಯುತವಾಗಿ ಅಂಬೇಡ್ಕರ್‌ ಅವರ ಅಂತ್ಯ ಸಂಸ್ಕಾರವನ್ನು ಮಾಡಲು ಬಿಡಲಿಲ್ಲ. ಅಂತಹ ಪಕ್ಷಕ್ಕೆ ಅಂಬೇಡ್ಕರ್‌ ಹೆಸರು ಹೇಳುವ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದರು.

ನೆಹರು, ಇಂದಿರಾ ಗಾಂಧಿ ಅವರ ರಾಷ್ಟ್ರೀಯ ಸ್ಮಾರಕಕ್ಕೆ ಜಾಗ ನೀಡಿದ ಕಾಂಗ್ರೆಸ್‌ ಬಾಬಾ ಸಾಹೇಬರಿಗೆ ಯಾಕೆ ನೀಡಲಿಲ್ಲ. ಅಂದು ಅವರಿಗೆ ಅಂಬೇಡ್ಕರ್‌ ನೆನಪಾಗಲಿಲ್ಲವೇ, ಮೊದಿ ಅವರು ಅಧಿಕಾರಕ್ಕೆ ಬಂದು ಬಾಬಾ ಸಾಹೇಬರ್‌ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದೆ. ಆದರೆ ಕಾಂಗ್ರೆಸ್‌ ನೆಹರು ಕುಟುಂಬದ ಕಟ್ಟ ಕಡೆಯ ವ್ಯಕ್ತಿಗೂ ಅಧಿಕಾರ ಕೊಡುವ ಕಡೆ ಗಮನ ನೀಡಿದೆ. ಇಂತಹವರಿಂದ ಬಿಜೆಪಿ ಪಕ್ಷ ಅಂಬೇಡ್ಕರರ ಬಗ್ಗೆ ತಿಳಿದುಕೊಳ್ಳಬೇಕಿಲ್ಲ ಎಂದು ಕಿಡಿಕಾರಿದರು.

ದೇಶದ ಸಂವಿಧಾನ ಈ ರಾಷ್ಟ್ರದ ಸಾಮಾಜಿಕ ಸಾಂಸ್ಕತಿಕ ವೈವಿಧ್ಯತೆ ಮತ್ತು ಸಂಕೀರ್ಣತೆಯನ್ನು ಪ್ರತಿಬಿಂಬಿಸುವ ವಿಶ್ವದ ಅತಿ ಉದ್ದವಾದ ಲಿಖಿತ ಸಂವಿಧಾನ ಎಂದು ಹೆಸರಾಗಿದೆ. ಭಾರತದ ಸಂವಿಧಾನವು ಪ್ರಜಾಪ್ರಭುತ್ವ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯ ತತ್ವಗಳನ್ನು ಪ್ರತಿಪಾದಿಸುತ್ತದೆ. ಇದುವೇ ನಮ್ಮ ದೇಶದ ಆಡಳಿತ ವ್ಯವಸ್ಥೆಯ ತಳಹದಿ ಎಂದು ತಿಳಿಸಿದರು.

andolanait

Recent Posts

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 mins ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 mins ago

ಓದುಗರ ಪತ್ರ: ತಂತ್ರಜ್ಞಾನಾಧಾರಿತ ನ್ಯೂಟ್ರಿ ಸ್ಕೋರ್ ಜಾರಿಗೆ ತನ್ನಿ

ದೇಶದಲ್ಲಿ ೪೦ ಕೋಟಿಗೂ ಹೆಚ್ಚು ಮಂದಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರೂ ಜಂಕ್ ಫುಡ್ ಕಂಪೆನಿಗಳು ಪೌಷ್ಟಿಕಾಂಶದ ವಿವರಗಳನ್ನು…

7 mins ago

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago