ರಾಜ್ಯ

ಅಂಬೇಡ್ಕರ್‌ ಅವರ ಆಶಯವನ್ನು ಮೋದಿಜೀ ನೆರವೇರಿಸುತ್ತಿದ್ದಾರೆ: ಬಿವೈ ವಿಜಯೇಂದ್ರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಮತ ಬ್ಯಾಂಕ್‌ ರಾಜಕಾರಣವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಬಾಬಾ ಸಾಹೇಬರ ಆಶಯವನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಇಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಎಸ್‌ಸಿ ಮೋರ್ಚಾ ವತಿಯಿಂದ ಆಯೋಜಿಸಲಾಗಿದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನೆಹರೂ ಸ್ಮಾರಕಕ್ಕೆ ೩೦ ಎಕರೆ, ಇಂದಿರಾ ಗಾಂಧಿ ಸ್ಮಾರಕಕ್ಕೆ ೨೦ ಎಕರೆ ಜಾಗ ನೀಡಿದ ಕಾಂಗ್ರೆಸ್‌ ಸರ್ಕಾರ ಅಂಬೇಡ್ಕರ್‌ ಅವರ ಹೆಸರನ್ನು ನುಡಿ ಮುತ್ತಾಗಿ ಬಳಸುವ ಅವರು, ಗೌರವಯುತವಾಗಿ ಅಂಬೇಡ್ಕರ್‌ ಅವರ ಅಂತ್ಯ ಸಂಸ್ಕಾರವನ್ನು ಮಾಡಲು ಬಿಡಲಿಲ್ಲ. ಅಂತಹ ಪಕ್ಷಕ್ಕೆ ಅಂಬೇಡ್ಕರ್‌ ಹೆಸರು ಹೇಳುವ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದರು.

ನೆಹರು, ಇಂದಿರಾ ಗಾಂಧಿ ಅವರ ರಾಷ್ಟ್ರೀಯ ಸ್ಮಾರಕಕ್ಕೆ ಜಾಗ ನೀಡಿದ ಕಾಂಗ್ರೆಸ್‌ ಬಾಬಾ ಸಾಹೇಬರಿಗೆ ಯಾಕೆ ನೀಡಲಿಲ್ಲ. ಅಂದು ಅವರಿಗೆ ಅಂಬೇಡ್ಕರ್‌ ನೆನಪಾಗಲಿಲ್ಲವೇ, ಮೊದಿ ಅವರು ಅಧಿಕಾರಕ್ಕೆ ಬಂದು ಬಾಬಾ ಸಾಹೇಬರ್‌ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದೆ. ಆದರೆ ಕಾಂಗ್ರೆಸ್‌ ನೆಹರು ಕುಟುಂಬದ ಕಟ್ಟ ಕಡೆಯ ವ್ಯಕ್ತಿಗೂ ಅಧಿಕಾರ ಕೊಡುವ ಕಡೆ ಗಮನ ನೀಡಿದೆ. ಇಂತಹವರಿಂದ ಬಿಜೆಪಿ ಪಕ್ಷ ಅಂಬೇಡ್ಕರರ ಬಗ್ಗೆ ತಿಳಿದುಕೊಳ್ಳಬೇಕಿಲ್ಲ ಎಂದು ಕಿಡಿಕಾರಿದರು.

ದೇಶದ ಸಂವಿಧಾನ ಈ ರಾಷ್ಟ್ರದ ಸಾಮಾಜಿಕ ಸಾಂಸ್ಕತಿಕ ವೈವಿಧ್ಯತೆ ಮತ್ತು ಸಂಕೀರ್ಣತೆಯನ್ನು ಪ್ರತಿಬಿಂಬಿಸುವ ವಿಶ್ವದ ಅತಿ ಉದ್ದವಾದ ಲಿಖಿತ ಸಂವಿಧಾನ ಎಂದು ಹೆಸರಾಗಿದೆ. ಭಾರತದ ಸಂವಿಧಾನವು ಪ್ರಜಾಪ್ರಭುತ್ವ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯ ತತ್ವಗಳನ್ನು ಪ್ರತಿಪಾದಿಸುತ್ತದೆ. ಇದುವೇ ನಮ್ಮ ದೇಶದ ಆಡಳಿತ ವ್ಯವಸ್ಥೆಯ ತಳಹದಿ ಎಂದು ತಿಳಿಸಿದರು.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

16 mins ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

17 mins ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

1 hour ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

1 hour ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

2 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

3 hours ago