ರಾಜ್ಯ

ಆರ್‌ಎಸ್‌ಎಸ್‌ ನೋಂದಣಿಯಾಗದಿರಲು ಕಾರಣ ಬಿಚ್ಚಿಟ್ಟ ಮೋಹನ್‌ ಭಾಗವತ್‌

ಬೆಂಗಳೂರು: ಹಿಂದೂ ಧರ್ಮವನ್ನು ಈಗಲೂ ನೋಂದಣಿ ಮಾಡಿಲ್ಲ. ಅದೇ ರೀತಿ ನಾವು ಕೂಡ ಸಂಘದ ನೋಂದಣಿ ಮಾಡಿಸಿಕೊಂಡಿಲ್ಲ ಎಂದು ಆರ್‍ಎಸ್‍ಎಸ್ ಸರಸಂಚಾಲಕ ಮೋಹನ್ ಭಾಗವತ್ ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಮೋಹನ್‌ ಭಾಗವತ್‌ ಅವರು, ಆರ್‍ಎಸ್‍ಎಸ್ ಸ್ಥಾಪನೆಯಾಗಿದ್ದು, 1925ರಲ್ಲಿ. ಆಗ ದೇಶವನ್ನು ಬ್ರಿಟಿಷರು ಆಳುತ್ತಿದ್ದರು. ಅವರ ಬಳಿ ನಾವು ಆರ್‍ಎಸ್‍ಎಸ್‍ನ್ನು ನೋಂದಣಿ ಮಾಡಿಸಿಕೊಳ್ಳಬೇಕಿತ್ತೇ? ನೀವು ಅದನ್ನು ನಿರೀಕ್ಷೆ ಮಾಡುತ್ತೀರಾ? ನಾವು ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದೆವು. ಸ್ವಾತಂತ್ರ್ಯ ಬಂದ ನಂತರವು ಸಂಘಗಳನ್ನು ನೋಂದಣಿ ಮಾಡಬೇಕೆಂಬ ಕಡ್ಡಾಯವಿಲ್ಲ ಎಂದು ಪ್ರತಿಪಾದಿಸಿದರು.

ಸ್ವತಂತ್ರ ಬಂದ ನಂತರವೂ ನಾವು ನೋಂದಣಿ ಕಡ್ಡಾಯ ಮಾಡಿಲ್ಲ. ಯಾರು ಏನೇ ಹೇಳಲಿ ನಮ್ಮದು ಸ್ವತಂತ್ರ ಹಾಗೂ ಕಾನೂನಾತ್ಮಕವಾಗಿ ಸಂಸ್ಥೆಯಾಗಿ ದೇಶದ ಸಂವಿಧಾನದಡಿಯೇ ಕೆಲಸ ಮಾಡುತ್ತದೆ. ಹೀಗಾಗಿ ನೋಂದಣಿ ಮಾಡಿಸಿಲ್ಲ. ಅಷ್ಟೇ ಏಕೆ ಹಿಂದೂ ಧರ್ಮ ಈಗಲೂ ಎಲ್ಲಾದರೂ ನೋಂದಣಿಯಾಗಿದೆಯೇ ಎಂದು ಮರು ಪ್ರಶ್ನೆ ಮಾಡಿದರು.

ದೇಶದಲ್ಲಿ ಮೂರು ಬಾರಿ ಆರ್‍ಎಸ್‍ಎಸ್ ನಿಷೇಧಕ್ಕೆ ಒಳಪಟ್ಟಿತ್ತು. ಮಹಾತ್ಮ ಗಾಂಧಿ ಹತ್ಯೆ ಪ್ರಕರಣ, ತುರ್ತು ಪರಿಸ್ಥಿತಿ ಮತ್ತು ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಮಾಡಿದಾಗ ನಿಷೇಧ ಹೇರಲಾಗಿತ್ತು. ಆದರೆ ಈ ಮೂರು ಪ್ರಕರಣಗಳಲ್ಲಿ ಆರ್‍ಎಸ್‍ಎಸ್ ಕೈವಾಡ ಇಲ್ಲದಿರುವುದು ಸಾಬೀತಾಗಿದ್ದರಿಂದ ನ್ಯಾಯಾಲಯ ಕೂಡ ಮಧ್ಯಪ್ರವೇಶ ಮಾಡಲಿಲ್ಲ ಎಂದು ಹೇಳಿದರು.

ನಮ್ಮದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ನಾವು ಕಾಲ ಕಾಲಕ್ಕೆ ತೆರಿಗೆ ಕಟ್ಟುತ್ತೇವೆ. ಗುರುದಕ್ಷಿಣೆ ಹೊರತಾಗಿ ಆದಾಯ ತೆರಿಗೆ ಇಲಾಖೆ ತೆರಿಗೆ ಕಟ್ಟಲು ಸೂಚಿಸಿದೆ. ಎಲ್ಲವೂ ದಾಖಲೆಯಲ್ಲಿ ಇವೆ ಎಂದು ತಿಳಿಸಿದರು.

ಆರ್‍ಎಸ್‍ಎಸ್‍ಗೆ ಒಂದು ಶಾಶ್ವತವಾದ ಸಂಕೇತ ಬೇಕಾಗಿತ್ತು. ಹೀಗಾಗಿ ನಾವು ಭಾಗವಧ್ವಜವನ್ನು ನಂಬಿದ್ದೇವೆ. ಹಾಗಂತ ದೇಶದ ತ್ರಿವರ್ಣ ಧ್ವಜವನ್ನು ನಾವು ಎಂದಿಗೂ ವಿರೋಧಿಸಿಲ್ಲ. ನಮ್ಮ ರಾಷ್ಟ್ರದ ಹೆಮ್ಮೆಯ ಸಂಕೇತವಾಗಿರುವ ಯಾವಾಗಲೂ ನಾವು ಅತ್ಯುನ್ನತ ಗೌರವ ಕೊಡುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

28 mins ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

60 mins ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

1 hour ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

2 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

3 hours ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

3 hours ago