ರಾಜ್ಯ

ಆರ್‌ಎಸ್‌ಎಸ್‌ ನೋಂದಣಿಯಾಗದಿರಲು ಕಾರಣ ಬಿಚ್ಚಿಟ್ಟ ಮೋಹನ್‌ ಭಾಗವತ್‌

ಬೆಂಗಳೂರು: ಹಿಂದೂ ಧರ್ಮವನ್ನು ಈಗಲೂ ನೋಂದಣಿ ಮಾಡಿಲ್ಲ. ಅದೇ ರೀತಿ ನಾವು ಕೂಡ ಸಂಘದ ನೋಂದಣಿ ಮಾಡಿಸಿಕೊಂಡಿಲ್ಲ ಎಂದು ಆರ್‍ಎಸ್‍ಎಸ್ ಸರಸಂಚಾಲಕ ಮೋಹನ್ ಭಾಗವತ್ ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಮೋಹನ್‌ ಭಾಗವತ್‌ ಅವರು, ಆರ್‍ಎಸ್‍ಎಸ್ ಸ್ಥಾಪನೆಯಾಗಿದ್ದು, 1925ರಲ್ಲಿ. ಆಗ ದೇಶವನ್ನು ಬ್ರಿಟಿಷರು ಆಳುತ್ತಿದ್ದರು. ಅವರ ಬಳಿ ನಾವು ಆರ್‍ಎಸ್‍ಎಸ್‍ನ್ನು ನೋಂದಣಿ ಮಾಡಿಸಿಕೊಳ್ಳಬೇಕಿತ್ತೇ? ನೀವು ಅದನ್ನು ನಿರೀಕ್ಷೆ ಮಾಡುತ್ತೀರಾ? ನಾವು ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದೆವು. ಸ್ವಾತಂತ್ರ್ಯ ಬಂದ ನಂತರವು ಸಂಘಗಳನ್ನು ನೋಂದಣಿ ಮಾಡಬೇಕೆಂಬ ಕಡ್ಡಾಯವಿಲ್ಲ ಎಂದು ಪ್ರತಿಪಾದಿಸಿದರು.

ಸ್ವತಂತ್ರ ಬಂದ ನಂತರವೂ ನಾವು ನೋಂದಣಿ ಕಡ್ಡಾಯ ಮಾಡಿಲ್ಲ. ಯಾರು ಏನೇ ಹೇಳಲಿ ನಮ್ಮದು ಸ್ವತಂತ್ರ ಹಾಗೂ ಕಾನೂನಾತ್ಮಕವಾಗಿ ಸಂಸ್ಥೆಯಾಗಿ ದೇಶದ ಸಂವಿಧಾನದಡಿಯೇ ಕೆಲಸ ಮಾಡುತ್ತದೆ. ಹೀಗಾಗಿ ನೋಂದಣಿ ಮಾಡಿಸಿಲ್ಲ. ಅಷ್ಟೇ ಏಕೆ ಹಿಂದೂ ಧರ್ಮ ಈಗಲೂ ಎಲ್ಲಾದರೂ ನೋಂದಣಿಯಾಗಿದೆಯೇ ಎಂದು ಮರು ಪ್ರಶ್ನೆ ಮಾಡಿದರು.

ದೇಶದಲ್ಲಿ ಮೂರು ಬಾರಿ ಆರ್‍ಎಸ್‍ಎಸ್ ನಿಷೇಧಕ್ಕೆ ಒಳಪಟ್ಟಿತ್ತು. ಮಹಾತ್ಮ ಗಾಂಧಿ ಹತ್ಯೆ ಪ್ರಕರಣ, ತುರ್ತು ಪರಿಸ್ಥಿತಿ ಮತ್ತು ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಮಾಡಿದಾಗ ನಿಷೇಧ ಹೇರಲಾಗಿತ್ತು. ಆದರೆ ಈ ಮೂರು ಪ್ರಕರಣಗಳಲ್ಲಿ ಆರ್‍ಎಸ್‍ಎಸ್ ಕೈವಾಡ ಇಲ್ಲದಿರುವುದು ಸಾಬೀತಾಗಿದ್ದರಿಂದ ನ್ಯಾಯಾಲಯ ಕೂಡ ಮಧ್ಯಪ್ರವೇಶ ಮಾಡಲಿಲ್ಲ ಎಂದು ಹೇಳಿದರು.

ನಮ್ಮದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ನಾವು ಕಾಲ ಕಾಲಕ್ಕೆ ತೆರಿಗೆ ಕಟ್ಟುತ್ತೇವೆ. ಗುರುದಕ್ಷಿಣೆ ಹೊರತಾಗಿ ಆದಾಯ ತೆರಿಗೆ ಇಲಾಖೆ ತೆರಿಗೆ ಕಟ್ಟಲು ಸೂಚಿಸಿದೆ. ಎಲ್ಲವೂ ದಾಖಲೆಯಲ್ಲಿ ಇವೆ ಎಂದು ತಿಳಿಸಿದರು.

ಆರ್‍ಎಸ್‍ಎಸ್‍ಗೆ ಒಂದು ಶಾಶ್ವತವಾದ ಸಂಕೇತ ಬೇಕಾಗಿತ್ತು. ಹೀಗಾಗಿ ನಾವು ಭಾಗವಧ್ವಜವನ್ನು ನಂಬಿದ್ದೇವೆ. ಹಾಗಂತ ದೇಶದ ತ್ರಿವರ್ಣ ಧ್ವಜವನ್ನು ನಾವು ಎಂದಿಗೂ ವಿರೋಧಿಸಿಲ್ಲ. ನಮ್ಮ ರಾಷ್ಟ್ರದ ಹೆಮ್ಮೆಯ ಸಂಕೇತವಾಗಿರುವ ಯಾವಾಗಲೂ ನಾವು ಅತ್ಯುನ್ನತ ಗೌರವ ಕೊಡುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

4 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

14 hours ago