ರಾಜ್ಯ

ಮೊಹಾಂತಿ ಕೇಂದ್ರಕ್ಕೆ ಆಯ್ಕೆ : ಈ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದ ಹೋಂ ಮಿನಿಸ್ಟರ್‌

ಬೆಂಗಳೂರು : ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್‌ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು‌.

ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಈ ಬಗ್ಗೆ ಬಹಳಷ್ಟು ತಪ್ಪು ಕಲ್ಪನೆಗಳನ್ನು ಹುಟ್ಟುಹಾಕಲಾಗುತ್ತಿದೆ. ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ಮಾಡಬೇಕು ಎಂದು ಸರ್ಕಾರ ತೀರ್ಮಾನ ಮಾಡಿತು. ಪ್ರಣವ್ ಮೊಹಾಂತಿಯವರನ್ನು ನೇಮಿಸಿದ್ದೇವೆ. ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಅವರ ಹೆಸರಿದೆ.‌ ಅವರನ್ನು ಕೇಂದ್ರದ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಇಲ್ಲಸಲ್ಲದ ಪೋಸ್ಟಿಂಗ್‌ಗಳನ್ನು ಮಾಡಲಾಗುತ್ತಿದೆ. ಇದು ಸರಿ ಕಾಣಿಸುವುದಿಲ್ಲ. ಪ್ರಕರಣದಲ್ಲಿ ಸರ್ಕಾರದ ಆಸಕ್ತಿ ಏನಿದೆ? ಎಸ್‌ಐಟಿ ಯಾಕೆ ರಚಿಸುತ್ತಿದ್ದೆವು ಎಂದು ಪ್ರಶ್ನಿಸಿದ ಅವರು, ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕು ಎಂಬುದಷ್ಟೆ ಸರ್ಕಾರಕ್ಕೆ ಮುಖ್ಯ ಎಂದು ಹೇಳಿದರು.

ಈ ನಿಟ್ಟಿನಲ್ಲಿ ಎಸ್‌ಐಟಿ ಮಾಡಿದ್ದೇವೆ. ಎಸ್‌ಐಟಿ ತನಿಖೆ ನಡೆಸಿ, ವರದಿ ಸಲ್ಲಿಸಿದ ನಂತರ ಸತ್ಯಾಸತ್ಯತೆ ಹೊರಬರುತ್ತವೆ. ನಮಗೆ ಬೇಕಿರುವುದು ಅಷ್ಟೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಯಾರನ್ನು ರಕ್ಷಣೆ ಮಾಡಬೇಕು, ಯಾರನ್ನೋ ಸಿಕ್ಕಿಹಾಕಿಸಬೇಕು ಎಂಬ ಅಜೆಂಡಾ ಸರ್ಕಾರಕ್ಕೆ ಖಂಡಿತವಾಗಿಯೂ ಇಲ್ಲ. ಯಾರು ಕೂಡ ಅದನ್ನು ತಪ್ಪು ಭಾವನೆಯಿಂದ ನೋಡಬಾರದು. ಪಾರದರ್ಶಕವಾಗಿ ತನಿಖೆ ಮಾಡಬೇಕು ಎಂದು ಹೇಳಿದ್ದೇವೆ. ಇದು ಸರ್ಕಾರಕ್ಕೆ ಇರುವ ಅಜೆಂಡಾ ಎಂದು ಹೇಳಿದರು‌.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

13 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago