ಮಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ಅವರ ಶವ ಪತ್ತೆಯಾಗಿದೆ.
ಕೂಳೂರಿನ ಸೇತುವೆ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ವ್ಯಕ್ತಿಯೊಬ್ಬರ ತಲೆ ಕಾಣಿಸುತ್ತಿತ್ತು. ಸಮೀಪಕ್ಕೆ ತೆರಳಿದ ಈಜುಗಾರರು ಇದು ಮುಮ್ತಾಜ್ ಅಲಿ ಅವರ ದೇಹ ಎಂದು ಖಚಿತಪಡಿಸಿದ್ದಾರೆ.
ಫಲ್ಗುಣಿ ನದಿಯಿಂದ ಶವವನ್ನು ಮೇಲಕ್ಕೆ ಎತ್ತಲಾಗಿದ್ದು, ಮುಮ್ತಾಜ್ ಅಲಿ ಅವರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ಮುಮ್ತಾಜ್ ಅಲಿ ಅವರು, ನಿನ್ನೆ ಬೆಳಗಿನ ಜಾವ ಯಾರಿಗೂ ತಿಳಿಯದಂತೆ ಮನೆ ಬಿಟ್ಟು ಹೋಗಿದ್ದರು. ಈ ವೇಳೆ ಕೂಳೂರು ಹೈವೇಯಲ್ಲಿ ಖಾಸಗಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದಿದ್ದರು.
ಈ ಹಿನ್ನೆಲೆಯಲ್ಲಿ ಸೇತುವೆ ಬಳಿಯೇ ಕಾರು ನಿಲ್ಲಿಸಿದ್ದ ಪರಿಣಾಮ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು. ಇಂದು ಮುಮ್ತಾಜ್ ಅಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…