ಮಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ಅವರ ಶವ ಪತ್ತೆಯಾಗಿದೆ.
ಕೂಳೂರಿನ ಸೇತುವೆ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ವ್ಯಕ್ತಿಯೊಬ್ಬರ ತಲೆ ಕಾಣಿಸುತ್ತಿತ್ತು. ಸಮೀಪಕ್ಕೆ ತೆರಳಿದ ಈಜುಗಾರರು ಇದು ಮುಮ್ತಾಜ್ ಅಲಿ ಅವರ ದೇಹ ಎಂದು ಖಚಿತಪಡಿಸಿದ್ದಾರೆ.
ಫಲ್ಗುಣಿ ನದಿಯಿಂದ ಶವವನ್ನು ಮೇಲಕ್ಕೆ ಎತ್ತಲಾಗಿದ್ದು, ಮುಮ್ತಾಜ್ ಅಲಿ ಅವರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ಮುಮ್ತಾಜ್ ಅಲಿ ಅವರು, ನಿನ್ನೆ ಬೆಳಗಿನ ಜಾವ ಯಾರಿಗೂ ತಿಳಿಯದಂತೆ ಮನೆ ಬಿಟ್ಟು ಹೋಗಿದ್ದರು. ಈ ವೇಳೆ ಕೂಳೂರು ಹೈವೇಯಲ್ಲಿ ಖಾಸಗಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದಿದ್ದರು.
ಈ ಹಿನ್ನೆಲೆಯಲ್ಲಿ ಸೇತುವೆ ಬಳಿಯೇ ಕಾರು ನಿಲ್ಲಿಸಿದ್ದ ಪರಿಣಾಮ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು. ಇಂದು ಮುಮ್ತಾಜ್ ಅಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ.
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…