ಮಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ಅವರ ಶವ ಪತ್ತೆಯಾಗಿದೆ.
ಕೂಳೂರಿನ ಸೇತುವೆ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ವ್ಯಕ್ತಿಯೊಬ್ಬರ ತಲೆ ಕಾಣಿಸುತ್ತಿತ್ತು. ಸಮೀಪಕ್ಕೆ ತೆರಳಿದ ಈಜುಗಾರರು ಇದು ಮುಮ್ತಾಜ್ ಅಲಿ ಅವರ ದೇಹ ಎಂದು ಖಚಿತಪಡಿಸಿದ್ದಾರೆ.
ಫಲ್ಗುಣಿ ನದಿಯಿಂದ ಶವವನ್ನು ಮೇಲಕ್ಕೆ ಎತ್ತಲಾಗಿದ್ದು, ಮುಮ್ತಾಜ್ ಅಲಿ ಅವರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ಮುಮ್ತಾಜ್ ಅಲಿ ಅವರು, ನಿನ್ನೆ ಬೆಳಗಿನ ಜಾವ ಯಾರಿಗೂ ತಿಳಿಯದಂತೆ ಮನೆ ಬಿಟ್ಟು ಹೋಗಿದ್ದರು. ಈ ವೇಳೆ ಕೂಳೂರು ಹೈವೇಯಲ್ಲಿ ಖಾಸಗಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದಿದ್ದರು.
ಈ ಹಿನ್ನೆಲೆಯಲ್ಲಿ ಸೇತುವೆ ಬಳಿಯೇ ಕಾರು ನಿಲ್ಲಿಸಿದ್ದ ಪರಿಣಾಮ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು. ಇಂದು ಮುಮ್ತಾಜ್ ಅಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…