ರಾಜ್ಯ

ಫಲ್ಗುಣಿ ನದಿಯಲ್ಲಿ ಮೊಯಿದ್ದೀನ್‌ ಬಾವ ಸಹೋದರನ ಶವ ಪತ್ತೆ

ಮಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಮೊಯಿದ್ದೀನ್‌ ಬಾವ ಅವರ ಸಹೋದರ ಮುಮ್ತಾಜ್‌ ಅಲಿ ಅವರ ಶವ ಪತ್ತೆಯಾಗಿದೆ.

ಕೂಳೂರಿನ ಸೇತುವೆ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ವ್ಯಕ್ತಿಯೊಬ್ಬರ ತಲೆ ಕಾಣಿಸುತ್ತಿತ್ತು. ಸಮೀಪಕ್ಕೆ ತೆರಳಿದ ಈಜುಗಾರರು ಇದು ಮುಮ್ತಾಜ್‌ ಅಲಿ ಅವರ ದೇಹ ಎಂದು ಖಚಿತಪಡಿಸಿದ್ದಾರೆ.

ಫಲ್ಗುಣಿ ನದಿಯಿಂದ ಶವವನ್ನು ಮೇಲಕ್ಕೆ ಎತ್ತಲಾಗಿದ್ದು, ಮುಮ್ತಾಜ್‌ ಅಲಿ ಅವರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ಮುಮ್ತಾಜ್‌ ಅಲಿ ಅವರು, ನಿನ್ನೆ ಬೆಳಗಿನ ಜಾವ ಯಾರಿಗೂ ತಿಳಿಯದಂತೆ ಮನೆ ಬಿಟ್ಟು ಹೋಗಿದ್ದರು. ಈ ವೇಳೆ ಕೂಳೂರು ಹೈವೇಯಲ್ಲಿ ಖಾಸಗಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದಿದ್ದರು.

ಈ ಹಿನ್ನೆಲೆಯಲ್ಲಿ ಸೇತುವೆ ಬಳಿಯೇ ಕಾರು ನಿಲ್ಲಿಸಿದ್ದ ಪರಿಣಾಮ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು. ಇಂದು ಮುಮ್ತಾಜ್‌ ಅಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

52 seconds ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

13 mins ago

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

2 hours ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

2 hours ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

2 hours ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

2 hours ago