ವಿಜಯಪುರ ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾದ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು ಹಾಗೂ ಗೆದ್ದ ಅಭ್ಯರ್ಥಿಗಳ ದೂರುಗಳು ಸಹ ಇವೆ ಆಗಿದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ವಿ.ಸೋಮಣ್ಣ ಅವರ ದೂರು ಸಹ ಇದೆ. ಚಿಕ್ಕೋಡಿ ಕ್ಷೇತ್ರದ ಜೊಲ್ಲೆ ಅವರದ್ದು ಹೀಗೆ ಆಗಿದೆ. ದೊಡ್ಡ ದೊಡ್ಡ ಜವಾಬ್ದಾರಿ ಇರುವವರು ಈ ರೀತಿ ಮಾಡುವುದರಿಂದ ಪಕ್ಷಕ್ಕೆ ಒಳಿತಲ್ಲ. ಹೀಗಾಗಿ ಈ ವಿಚಾರವಾಗಿ ಸತ್ಯ ಶೋಧನಾ ಸಮಿತಿ ಆಗಬೇಕು ಎಂದು ಒತ್ತಾಯ ಮಾಡಿದರು.
ಅಲ್ಲದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 350 ರಿಂದ 400 ಸ್ಥಾನಗಳು ಬರುತ್ತವೆ ಎಂದು ನಿರೀಕ್ಷೆ ಇಟ್ಟಿದ್ದೆವು. ಬಹಳ ಕಡೆ ಗದ್ದಲವಾಗಿದೆ. ಕಾರ್ಯಕರ್ತರ ಜೊತೆ ಶಾಸಕರ ಜೊತೆ ಒಳ್ಳೆ ಸಂಬಂಧ ಇಟ್ಟುಕೊಂಡಿರಲಿಲ್ಲ. ಹೀಗಾಗಿ ಸೋಲಿಗೆ ಇವು ಕೂಡ ಕಾರಣವಾಗಿರಬಹುದು ಎಂದು ಹೇಳಿದರು.
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…
ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…