kc veerendra pappy
ಬೆಂಗಳೂರು : ಗೇಮಿಂಗ್ ಆ್ಯಪ್ಗಳಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರನ್ನು 35ನೇ ಸಿಸಿಹೆಚ್ ನ್ಯಾಯಾಲಯ 4 ದಿನ ಇಡಿ ಕಸ್ಟಡಿಗೆ ಒಪ್ಪಿಸಿದೆ.
ಜನಪ್ರತಿನಿಧಿಗಳ ನ್ಯಾಯಾಧೀಶರು ರಜೆಯಲ್ಲಿದ್ದ ಹಿನ್ನೆಲೆ 35ನೇ ಸಿಸಿಹೆಚ್ ಜಡ್ಜ್ ಮುಂದೆ ಇಡಿ ಹಾಜರುಪಡಿಸಿತ್ತು. ಶನಿವಾರ ವೀರೇಂದ್ರ ಪಪ್ಪಿ ಸಿಕ್ಕಿಂನ ಗ್ಯಾಂಗ್ಟಕ್ನಲ್ಲಿ ಬಂಧಿಸಲಾಗಿತ್ತು. ಶನಿವಾರ ರಾತ್ರಿಯೇ ಸಿಕ್ಕಿಂನಿಂದ ಬೆಂಗಳೂರಿಗೆ ಕರೆತಂದಿದ್ದ ಇಡಿ ಇವತ್ತು ಬೆಳಗ್ಗೆ ಬೌರಿಂಗ್ ಹಾಸ್ಪಿಟಲ್ನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಶಾಂತಿನಗರ ಇಡಿ ಕಚೇರಿಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿತ್ತು.
ದಾಳಿ ವೇಳೆ ಶಾಸಕ ಪಪ್ಪಿ ಮನೆಯಲ್ಲಿ 12 ಕೋಟಿ ರೂ. ನಗದು, 1 ಕೋಟಿ ರೂ. ವಿದೇಶಿ ಹಣ, 6 ಕೋಟಿ ರೂ. ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, ಐಷಾರಾಮಿ ಕಾರು, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್ಗಳನ್ನು ಇಡಿ ಸೀಜ್ ಮಾಡಿತ್ತು. ಇಡಿ 14 ದಿನ ತಮ್ಮ ಕಸ್ಟಡಿಗೆ ನೀಡಿ ಅಂತ ರಿಮ್ಯಾಂಡ್ನಲ್ಲಿ ಮನವಿ ಮಾಡಿತ್ತು. ಇದೇ ವೇಳೆ ವಿರೇಂದ್ರ ಪಪ್ಪಿ ಸಹೋದರ ಕೆ.ಸಿ. ನಾಗರಾಜ್ ಹಾಗೂ ಬೆಂಬಲಿಗರು ಇಡಿ ಕಚೇರಿ ಮುಂದೆ ಜಮಾಯಿಸಿದ್ದರು.
ವೀರೇಂದ್ರ ಪಪ್ಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…