ರಾಜ್ಯ

ಅಕ್ರಮ ಹಣ ವರ್ಗಾವಣೆ | ಶಾಸಕ ವೀರೇಂದ್ರ ಪಪ್ಪಿ 4 ದಿನ ಇ.ಡಿ ಕಸ್ಟಡಿಗೆ

ಬೆಂಗಳೂರು : ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರನ್ನು 35ನೇ ಸಿಸಿಹೆಚ್ ನ್ಯಾಯಾಲಯ 4 ದಿನ ಇಡಿ ಕಸ್ಟಡಿಗೆ ಒಪ್ಪಿಸಿದೆ.

ಜನಪ್ರತಿನಿಧಿಗಳ ನ್ಯಾಯಾಧೀಶರು ರಜೆಯಲ್ಲಿದ್ದ ಹಿನ್ನೆಲೆ 35ನೇ ಸಿಸಿಹೆಚ್ ಜಡ್ಜ್ ಮುಂದೆ ಇಡಿ ಹಾಜರುಪಡಿಸಿತ್ತು. ಶನಿವಾರ ವೀರೇಂದ್ರ ಪಪ್ಪಿ ಸಿಕ್ಕಿಂನ ಗ್ಯಾಂಗ್ಟಕ್‍ನಲ್ಲಿ ಬಂಧಿಸಲಾಗಿತ್ತು. ಶನಿವಾರ ರಾತ್ರಿಯೇ ಸಿಕ್ಕಿಂನಿಂದ ಬೆಂಗಳೂರಿಗೆ ಕರೆತಂದಿದ್ದ ಇಡಿ ಇವತ್ತು ಬೆಳಗ್ಗೆ ಬೌರಿಂಗ್ ಹಾಸ್ಪಿಟಲ್‍ನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಶಾಂತಿನಗರ ಇಡಿ ಕಚೇರಿಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿತ್ತು.

ದಾಳಿ ವೇಳೆ ಶಾಸಕ ಪಪ್ಪಿ ಮನೆಯಲ್ಲಿ 12 ಕೋಟಿ ರೂ. ನಗದು, 1 ಕೋಟಿ ರೂ. ವಿದೇಶಿ ಹಣ, 6 ಕೋಟಿ ರೂ. ಮೌಲ್ಯದ ಚಿನ್ನ, 10 ಕೆಜಿ ಬೆಳ್ಳಿ, ಐಷಾರಾಮಿ ಕಾರು, 17 ಬ್ಯಾಂಕ್ ಖಾತೆ ಹಾಗೂ 2 ಬ್ಯಾಂಕ್ ಲಾಕರ್‌ಗಳನ್ನು ಇಡಿ ಸೀಜ್ ಮಾಡಿತ್ತು. ಇಡಿ 14 ದಿನ ತಮ್ಮ ಕಸ್ಟಡಿಗೆ ನೀಡಿ ಅಂತ ರಿಮ್ಯಾಂಡ್‍ನಲ್ಲಿ ಮನವಿ ಮಾಡಿತ್ತು. ಇದೇ ವೇಳೆ ವಿರೇಂದ್ರ ಪಪ್ಪಿ ಸಹೋದರ ಕೆ.ಸಿ. ನಾಗರಾಜ್ ಹಾಗೂ ಬೆಂಬಲಿಗರು ಇಡಿ ಕಚೇರಿ ಮುಂದೆ ಜಮಾಯಿಸಿದ್ದರು.

ವೀರೇಂದ್ರ ಪಪ್ಪಿ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ಇ.ಡಿ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

19 mins ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

55 mins ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

1 hour ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

2 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

3 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

3 hours ago