ರಾಜ್ಯ

ಎಐ ಮೂಲಕ ಸಂಚಾರ ನಿಯಮ ಉಲ್ಲಂಘನೆ ಮೇಲೆ ನಿಗಾ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಸಹಾಯದಿಂದ ಸಂಚಾರ ನಿಯಮ ಉಲ್ಲಂಘನೆ ಮೇಲೆ ನಿಗಾ ಇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಳೆದ 3 ವರ್ಷಗಳಲ್ಲಿ 6 ಸಾವಿರಕ್ಕೂ ಹೆಚ್ಚು ಚಾಲನೆ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ. ಎನ್‌ಸಿಆರ್ಬಿ ಅಂಕಿಅಂಶಗಳ ಪ್ರಕಾರ ಬೈಕ್ ಅಪಘಾತಗಳಿಂದಲೇ ಹೆಚ್ಚು ಮರಣ ಉಂಟಾಗಿದೆ. ಆದ್ದರಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು ಎಂದು ಸಲಹೆ ನೀಡಿದರು.

ಈ ಹಿಂದೆ ನಮ್ಮ ಕಾಂಗ್ರೆಸ್ ಸರ್ಕಾರ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆ ನೀಡಲು ಹರೀಶ್ ಸಾಂತ್ವನ ಯೋಜನೆ ಜಾರಿಗೆ ತಂದಿತ್ತು. ಆದರೆ ಅಪಘಾತವಾಗಿ ಹೋದ ಜೀವ ಮತ್ತೆ ಮರಳಿ ತರಲು ಸಾಧ್ಯವೇ? ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸುವುದು, ಸಿಗ್ನಲ್ ಜಂಪ್ ಮಾಡಿ ವಾಹನ ಚಲಾಯಿಸುವುದರಿಂದ ಏನೂ ಪ್ರಯೋಜನವಿಲ್ಲ ಎಂದರು.

ಇನ್ನೂ ಪಾದಚಾರಿಗಳ ಅನುಕೂಲ, ಸುಗಮ ಸಂಚಾರಕ್ಕಾಗಿ ಹೈಕೋರ್ಟ್ ಆದೇಶದಂತೆ ಪಾದಚಾರಿ ಮಾರ್ಗ ವ್ಯಾಪಾರಿಗಳನ್ನು ತೆರವು ಮಾಡಲಾಗಿದೆ. ಪಾದಚಾರಿ ಮಾರ್ಗ ಇರುವುದು ಜನ ಓಡಾಡಲು. ಇಂತಹ ವ್ಯಾಪಾರಿಗಳು ನೋಂದಣಿ ಮಾಡಿಕೊಂಡು ರಸ್ತೆಯ ಒಂದು ಕಡೆ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು. ಅವರಿಗೆ ಆರ್ಥಿಕ ನೆರವು ನೀಡಲು ನಾವು ಸಿದ್ಧ. ಆದರೆ ಪಾದಚಾರಿ ಮಾರ್ಗದಲ್ಲಿ ಟೆಂಟ್ ಹಾಕಿಕೊಂಡು ವ್ಯಾಪಾರ ಮಾಡಬಾರದು ಎಂದಯ ಸಲಹೆ ನೀಡಿದರು.

andolanait

Recent Posts

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

28 mins ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

33 mins ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

1 hour ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

1 hour ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

1 hour ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

2 hours ago