ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಸಹಾಯದಿಂದ ಸಂಚಾರ ನಿಯಮ ಉಲ್ಲಂಘನೆ ಮೇಲೆ ನಿಗಾ ಇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಳೆದ 3 ವರ್ಷಗಳಲ್ಲಿ 6 ಸಾವಿರಕ್ಕೂ ಹೆಚ್ಚು ಚಾಲನೆ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ. ಎನ್ಸಿಆರ್ಬಿ ಅಂಕಿಅಂಶಗಳ ಪ್ರಕಾರ ಬೈಕ್ ಅಪಘಾತಗಳಿಂದಲೇ ಹೆಚ್ಚು ಮರಣ ಉಂಟಾಗಿದೆ. ಆದ್ದರಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು ಎಂದು ಸಲಹೆ ನೀಡಿದರು.
ಈ ಹಿಂದೆ ನಮ್ಮ ಕಾಂಗ್ರೆಸ್ ಸರ್ಕಾರ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆ ನೀಡಲು ಹರೀಶ್ ಸಾಂತ್ವನ ಯೋಜನೆ ಜಾರಿಗೆ ತಂದಿತ್ತು. ಆದರೆ ಅಪಘಾತವಾಗಿ ಹೋದ ಜೀವ ಮತ್ತೆ ಮರಳಿ ತರಲು ಸಾಧ್ಯವೇ? ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸುವುದು, ಸಿಗ್ನಲ್ ಜಂಪ್ ಮಾಡಿ ವಾಹನ ಚಲಾಯಿಸುವುದರಿಂದ ಏನೂ ಪ್ರಯೋಜನವಿಲ್ಲ ಎಂದರು.
ಇನ್ನೂ ಪಾದಚಾರಿಗಳ ಅನುಕೂಲ, ಸುಗಮ ಸಂಚಾರಕ್ಕಾಗಿ ಹೈಕೋರ್ಟ್ ಆದೇಶದಂತೆ ಪಾದಚಾರಿ ಮಾರ್ಗ ವ್ಯಾಪಾರಿಗಳನ್ನು ತೆರವು ಮಾಡಲಾಗಿದೆ. ಪಾದಚಾರಿ ಮಾರ್ಗ ಇರುವುದು ಜನ ಓಡಾಡಲು. ಇಂತಹ ವ್ಯಾಪಾರಿಗಳು ನೋಂದಣಿ ಮಾಡಿಕೊಂಡು ರಸ್ತೆಯ ಒಂದು ಕಡೆ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು. ಅವರಿಗೆ ಆರ್ಥಿಕ ನೆರವು ನೀಡಲು ನಾವು ಸಿದ್ಧ. ಆದರೆ ಪಾದಚಾರಿ ಮಾರ್ಗದಲ್ಲಿ ಟೆಂಟ್ ಹಾಕಿಕೊಂಡು ವ್ಯಾಪಾರ ಮಾಡಬಾರದು ಎಂದಯ ಸಲಹೆ ನೀಡಿದರು.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…