ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಸಹಾಯದಿಂದ ಸಂಚಾರ ನಿಯಮ ಉಲ್ಲಂಘನೆ ಮೇಲೆ ನಿಗಾ ಇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಳೆದ 3 ವರ್ಷಗಳಲ್ಲಿ 6 ಸಾವಿರಕ್ಕೂ ಹೆಚ್ಚು ಚಾಲನೆ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ. ಎನ್ಸಿಆರ್ಬಿ ಅಂಕಿಅಂಶಗಳ ಪ್ರಕಾರ ಬೈಕ್ ಅಪಘಾತಗಳಿಂದಲೇ ಹೆಚ್ಚು ಮರಣ ಉಂಟಾಗಿದೆ. ಆದ್ದರಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು ಎಂದು ಸಲಹೆ ನೀಡಿದರು.
ಈ ಹಿಂದೆ ನಮ್ಮ ಕಾಂಗ್ರೆಸ್ ಸರ್ಕಾರ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆ ನೀಡಲು ಹರೀಶ್ ಸಾಂತ್ವನ ಯೋಜನೆ ಜಾರಿಗೆ ತಂದಿತ್ತು. ಆದರೆ ಅಪಘಾತವಾಗಿ ಹೋದ ಜೀವ ಮತ್ತೆ ಮರಳಿ ತರಲು ಸಾಧ್ಯವೇ? ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸುವುದು, ಸಿಗ್ನಲ್ ಜಂಪ್ ಮಾಡಿ ವಾಹನ ಚಲಾಯಿಸುವುದರಿಂದ ಏನೂ ಪ್ರಯೋಜನವಿಲ್ಲ ಎಂದರು.
ಇನ್ನೂ ಪಾದಚಾರಿಗಳ ಅನುಕೂಲ, ಸುಗಮ ಸಂಚಾರಕ್ಕಾಗಿ ಹೈಕೋರ್ಟ್ ಆದೇಶದಂತೆ ಪಾದಚಾರಿ ಮಾರ್ಗ ವ್ಯಾಪಾರಿಗಳನ್ನು ತೆರವು ಮಾಡಲಾಗಿದೆ. ಪಾದಚಾರಿ ಮಾರ್ಗ ಇರುವುದು ಜನ ಓಡಾಡಲು. ಇಂತಹ ವ್ಯಾಪಾರಿಗಳು ನೋಂದಣಿ ಮಾಡಿಕೊಂಡು ರಸ್ತೆಯ ಒಂದು ಕಡೆ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು. ಅವರಿಗೆ ಆರ್ಥಿಕ ನೆರವು ನೀಡಲು ನಾವು ಸಿದ್ಧ. ಆದರೆ ಪಾದಚಾರಿ ಮಾರ್ಗದಲ್ಲಿ ಟೆಂಟ್ ಹಾಕಿಕೊಂಡು ವ್ಯಾಪಾರ ಮಾಡಬಾರದು ಎಂದಯ ಸಲಹೆ ನೀಡಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…