ಬೆಂಗಳೂರು: ನೆರೆಯ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿರುವುದರಿಂದ ರಾಜ್ಯದ ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ನಡೆಸಿ ಮಂಕಿಪಾಕ್ಸ್ ಶಂಕಿತರನ್ನು ಗುರುತಿಸಿ ಅವರ ಮೇಲೆ ತೀವ್ರ ನಿಗಾ ಇಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ಪ್ರಕರಣಗಳು ವರದಿಯಾದ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡುವುದು ಅಗತ್ಯ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಈ ರೋಗದ ಶಂಕಿತ ಪ್ರಕರಣಗಳ ನಿರ್ವಹಣೆಗೆ ಬೆಂಗಳೂರಿನ ಇಂದಿರಾನಗರದಲ್ಲಿರು ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹಾಗೂ ಮಂಗಳೂರಿ ವೆನ್ಲಾಕ್ ಆಸ್ಪತ್ರೆಗಳನ್ನು ಗುರುತಿಸಲಾಗಿದೆ.
ಶಂಕಿತರಿಗೆ ಆರೋಗ್ಯ ತಪಾಸಣೆ ನಡೆಸಿದಾಗ ಪರೀಕ್ಷೆಯ ವರದಿಯಲ್ಲಿ ರೋಗ ದೃಢಪಟ್ಟರೆ 21 ದಿನಗಳವರೆಗೆ ಅಥವಾ ಗುಳ್ಳೆಗಳು ಸಂಪೂರ್ಣ ನಿವಾರಣೆಯಾಗುವವರೆಗೆ ಪ್ರತ್ಯೇಕವಾಸದಲ್ಲಿ ಇರಿಸಬೇಕು ಎಂದು ತಿಳಿಸಲಾಗಿದೆ.
ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…
ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…
ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-II ಮಿಷನ್ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…
ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು…
ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್ಎಸ್ಎಲ್ಸಿ ಪರೀಕ್ಷಾ…
೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ.…