ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆ ಆರಂಭಿಸಿ, ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಕೋವಿಡ್-19 ಪ್ರಕರಣದ ಬೆನ್ನಲ್ಲೇ ಮಂಕಿಪಾಕ್ಸ್ ಭಾರತದಲ್ಲಿ ಮೊದಲ ಬಾರಿಗೆ ಈ ಪ್ರಕರಣ ನವದೆಹಲಿಯಲ್ಲಿ ಕಾಣಿಸಿಕೊಂಡ ನಂತರ, ಅಧಿಕಾರಿಗಳು ವೈರಸ್ ಹರಡುವುದನ್ನು ತಡೆಯಲು ಮುನ್ನಚ್ಚರಿಕೆಯ ಕ್ರಮವಾಗಿ ತ್ವರಿತವಾಗಿ ಕಾರ್ಯನಿರ್ವಹಿಸಲು ಮುಂದಾಗಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬ ಪ್ರಯಾಣಿಕರಿಗೆ ವೈರಸ್ ಪರೀಕ್ಷೆ ಮಾಡಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಪ್ರತಿದಿನ ಸುಮಾರು 2 ಸಾವಿರ ಪ್ರಯಾಣಿಕರನ್ನು ಪರೀಕ್ಷಿಸಲಾಗುತ್ತಿದೆ.
ಒಂದು ವೇಳೆ ಪ್ರಯಾಣಿಕರಿಗೆ ವೈರಸ್ ಖಚಿತಗೊಂಡರೆ ಕೋವಿಡ್-೧೯ ಸಾಂಕ್ರಾಮಿಕ ರೋಗದ ಆರಂಭಿಕ ಹಂತಗಳಲ್ಲಿ ಜಾರಿಗೆ ತಂದ ಪ್ರೋಟೋಕಾಲ್ಗಳನ್ನು ಅನುಸರಿಸಲಾಗುತ್ತದೆ. ಬಳಿಕ ಸೋಂಕಿಗೆ ಒಳಪಟ್ಟ ವ್ಯಕ್ತಿಗಳನ್ನು 21 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಿಸಲಾಗುತ್ತದೆ.
ಅಂತೆಯೇ ಆಫ್ರಿಕಾದ ಮಹಾಮಾರಿ ರೋಗವಾಗಿ ಕಾಡುತ್ತಿರುವ ಎಂಪಾಕ್ಸ್ ವೈರಸ್ ಪ್ರವೇಶವನ್ನು ತಡೆಯಲು ರಾಜ್ಯದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…