ರಾಜ್ಯ

ರಾಜ್ಯದಲ್ಲಿ ಮುಂಗಾರು ಚುರುಕು: ಹವಾಮಾನ ಇಲಾಖೆಯಿಂದ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮುಖ್ಯವಾಗಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ ಹವಾಮಾನ ಇಲಾಖೆ ಅಲ್ಲಿನ ಸ್ಥಳಗಳಿಗೆ ಅಲರ್ಟ್‌ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿಗೆ ಇಂದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಆರೆಂಜ್‌ ಅಲರ್ಟ್‌, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್‌, ಕಲಬುರ್ಗಿ ಮತ್ತು ಬೀದರ್‌ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಮಳೆಗಿಂತ ಗಾಳಿಯ ರಭಸ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವಡೆ ಸಾಧಾರಣ ಹಾಗೂ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ಇನ್ನೂ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಹಾಗೂ ಹಾಸನದಲ್ಲೂ ಹಗುರ ಮಳೆಯಾಗಲಿದ್ದು, ಅಲ್ಲಲ್ಲಿ ಗಾಳಿಯ ರಭಸ ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…

10 mins ago

ಓದುಗರ ಪತ್ರ: ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಲಿ

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…

13 mins ago

ಓದುಗರ ಪತ್ರ: ಇಷ್ಟೊಂದು ಸಿಗ್ನಲ್ ಲೈಟ್‌ಗಳು ಅಗತ್ಯವೇ?

ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…

17 mins ago

ಓದುಗರ ಪತ್ರ: ಪಿಜ್ಜಾ,ಬರ್ಗರ್ ಸೆಂಟರ್ ಕೆಲಸಗಳಲ್ಲಿ ಕನ್ನಡಿಗರಿಗೆ ಆದ್ಯತೆ ಇರಲಿ

ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ…

20 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ದೆಹಲಿ ಶೃಂಗ ಸಭೆ ಹೊರ ಹಾಕಿದ ಎಐ ಒಳನೋಟ

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…

2 hours ago

ದ್ವಿತೀಯ ಪಿಯುಸಿ: 5, 255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…

2 hours ago