ರಾಜ್ಯ

ರಾಜ್ಯದಲ್ಲಿ ಮುಂಗಾರು ಚುರುಕು: ಹವಾಮಾನ ಇಲಾಖೆಯಿಂದ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮುಖ್ಯವಾಗಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ ಹವಾಮಾನ ಇಲಾಖೆ ಅಲ್ಲಿನ ಸ್ಥಳಗಳಿಗೆ ಅಲರ್ಟ್‌ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿಗೆ ಇಂದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಆರೆಂಜ್‌ ಅಲರ್ಟ್‌, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್‌, ಕಲಬುರ್ಗಿ ಮತ್ತು ಬೀದರ್‌ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಮಳೆಗಿಂತ ಗಾಳಿಯ ರಭಸ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವಡೆ ಸಾಧಾರಣ ಹಾಗೂ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ಇನ್ನೂ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಹಾಗೂ ಹಾಸನದಲ್ಲೂ ಹಗುರ ಮಳೆಯಾಗಲಿದ್ದು, ಅಲ್ಲಲ್ಲಿ ಗಾಳಿಯ ರಭಸ ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

34 mins ago

ಓದುಗರ ಪತ್ರ | ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಿ

ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…

37 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ ; ಬಿಜೆಪಿಗೆ ತಮಿಳುನಾಡು, ಪಶ್ಚಿಮ ಬಂಗಾಳವೇ ತಲೆನೋವು

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…

1 hour ago

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

1 hour ago

ಅಣ್ಣಯ್ಯ ಸೇರಿ ಐವರಿಗೆ ಅಂಬೇಡ್ಕರ್‌ ಪ್ರಶಸ್ತಿ

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…

2 hours ago

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…

2 hours ago