ಬೆಂಗಳೂರು: ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ.
ಕರ್ನಾಟಕದಲ್ಲೂ ಇನ್ನೆರಡು ದಿನದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು, ಮಿಂಚು, ಬಿರುಗಾಳಿ ಹಾಗೂ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನೈಋತ್ಯ ಮುಂಗಾರು ಅರಬ್ಬಿ ಸಮುದ್ರದ ನೈಋತ್ಯ ಮತ್ತು ಆಗ್ನೇಯ ಭಾಗಗಳು, ಲಕ್ಷದ್ವೀಪ, ಕೇರಳ ಮತ್ತು ತಮಿಳುನಾಡಿನ ಕೆಲವು ಪ್ರದೇಶಗಳು ಹಾಗೂ ಬಂಗಾಳ ಕೊಲ್ಲಿಯ ಹಲವು ಭಾಗಗಳತ್ತ ಮುಂದುವರಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.




