ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ
ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ ಅಧಿವೇಶನವನ್ನು ನಡೆಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿರುವುದು ಉತ್ತರ ಕರ್ನಾಟಕ ಭಾಗದ ದೃಷ್ಟಿಯಿಂದ ಅತ್ಯಂತ ಮಹತ್ವದ ನಿರ್ಧಾರವಾಗಿದೆ.
ಇತಿಹಾಸದಲ್ಲೇ ಮೊದಲ ಬಾರಿ
ಸಾಮಾನ್ಯವಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಪ್ರತಿ ವರ್ಷ ಚಳಿಗಾಲದ ಅಧಿವೇಶನವನ್ನು (ನವೆಂಬರ್/ಡಿಸೆಂಬರ್) ಮಾತ್ರ ನಡೆಸಲಾಗುತ್ತಿತ್ತು. ಆದರೆ, ಇತಿಹಾಸದಲ್ಲೇ ಮೊದಲ ಬಾರಿಗೆ ಇಲ್ಲಿ ‘ಮಳೆಗಾಲದ ಅಧಿವೇಶನ‘ ನಡೆಸಲು ಸರ್ಕಾರ ಸಜ್ಜಾಗುತ್ತಿದೆ.
ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಜಂಟಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಈ ಕುರಿತು ವಿಸ್ಕೃತ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನವನ್ನು ಬೆಂಗಳೂರಿನ ಬದಲು ಬೆಳಗಾವಿಗೆ ಸ್ಥಳಾಂತರಿಸುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲಾಗಿದೆ.
ಮಳೆಗಾಲದ ಸದನವನ್ನು ಯಾವಾಗ ಆರಂಭಿಸಬೇಕು ಮತ್ತು ಎಷ್ಟು ದಿನಗಳ ಕಾಲ ನಡೆಸಬೇಕು ಎಂಬ ನಿಖರವಾದ ದಿನಾಂಕಗಳನ್ನು ಮುಂಬರುವ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮಗೊಳಿಸುವ ಸಾಧ್ಯತೆಯಿದೆ.
ಸಾಮಾನ್ಯವಾಗಿ ಕರ್ನಾಟಕದ ಮಳೆಗಾಲದ ಅಧಿವೇಶನವು ಜುಲೈ ತಿಂಗಳ ಅವಽಯಲ್ಲಿ ನಡೆಯಲಿದ್ದು, ಈ ಬಾರಿಯೂ ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಭವಾಗುವ ನಿರೀಕ್ಷೆಯಿದೆ.
ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದರಿಂದ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳು, ನೀರಾವರಿ ಯೋಜನೆಗಳು ಹಾಗೂ ಪ್ರಾದೇಶಿಕ ಅಸಮತೋಲನ ನಿವಾರಣೆಯ ಕುರಿತು ಹೆಚ್ಚು ಸಮಯ ವಿನಿಯೋಗಿಸಿ ಚರ್ಚಿಸಲು ಅನುಕೂಲವಾಗುತ್ತದೆ ಎಂಬುದು ಸರ್ಕಾರದ ಆಶಯ.
ಮಳೆಯ ಸವಾಲು ಹಾಗೂ ಸಿದ್ಧತೆ:
ಬೆಳಗಾವಿ ಭಾಗದಲ್ಲಿ ಜುಲೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಅಧಿವೇಶನಕ್ಕೆ ಬರುವ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಮಾಧ್ಯಮದವರಿಗೆ ಯಾವುದೇ ತೊಂದರೆಯಾಗದಂತೆ ಸುವರ್ಣಸೌಧದ ಆವರಣ ಹಾಗೂ ನಗರದಲ್ಲಿ ವಿಶೇಷ ಮೂಲಸೌಕರ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಮಹಾರಾಷ್ಟ್ರದ ಜೊತೆಗಿನ ಗಡಿ ವಿವಾದದ ಹಿನ್ನೆಲೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದನ್ನು ಸಾಬೀತುಪಡಿಸಲು ಮತ್ತು ಗಡಿನಾಡ ಕನ್ನಡಿಗರಲ್ಲಿ ಆತ್ಮವಿಶ್ವಾಸ ತುಂಬಲು ಈ ನಿರ್ಧಾರ ರಾಜಕೀಯವಾಗಿಯೂ ತಂತ್ರಗಾರಿಕೆಯಾಗಿದೆ.
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…