ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ.
ಇಂದಿನಿಂದ ಆಗಸ್ಟ್.ರವರೆಗೆ ಅಧಿವೇಶನ ನಡೆಯಲಿದ್ದು, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ.
ಮೊದಲ ದಿನದ ಅಧಿವೇಶನವಾದ ಇಂದು ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಆರ್ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಹಾಗೂ ಅಹಮದಾಬಾದ್ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಲಾಯಿತು.
ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಿದ್ದು, ಇದೆಲ್ಲವನ್ನು ಎದುರಿಸಲು ಆಡಳಿತ ಪಕ್ಷ ಕೂಡ ತಯಾರಿ ನಡೆಸಿದೆ.
ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ, ಅತಿವೃಷ್ಟಿ, ಅನಾವೃಷ್ಟಿ, ಪ್ರವಾಹ, ರಸಗೊಬ್ಬರದ ಅಭಾವ, ಒಳ ಮೀಸಲಾತಿ, ಮತಗಳ್ಳತನದ ಆರೋಪ ಸೇರಿದಂತೆ ಹಲವು ವಿಚಾರಗಳು ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ.
ಇನ್ನು ಅಧಿವೇಶನಕ್ಕೂ ಮುಂಚೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದರು.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ನಾಯಕರು, ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…