Mysore
24
clear sky

Social Media

ಬುಧವಾರ, 01 ಏಪ್ರಿಲ 2026
Light
Dark

ಜುಲೈ.14ರಿಂದ ವಿಧಾನಸಭೆ ಮುಂಗಾರು ಅಧಿವೇಶನ ಆರಂಭ ಸಾಧ್ಯತೆ

ಬೆಂಗಳೂರು: ಜುಲೈ.14ರಿಂದ ವಿಧಾನಸಭೆ ಮುಂಗಾರು ಅಧಿವೇಶನ ಆರಂಭವಾಗುವ ಸಾಧ್ಯತೆಗಳಿದ್ದು, ಈ ನಡುವಲ್ಲೇ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಹಾಗೂ ಜಾತಿಗಣತಿ ಮರು ಸಮೀಕ್ಷೆ ವಿಚಾರ ಹಿಡಿದು ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ.

ಅಧಿವೇಶನಕ್ಕೆ ಬಿಜೆಪಿ ಸಜ್ಜಾಗುತ್ತಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಹಾಗೂ ರಾಜ್ಯಪಾಲರಿಗೆ ದೂರು ನೀಡಲು ಸಜ್ಜಾಗುತ್ತಿದೆ. ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ, ಜಾತಿ ಗಣತಿ ಮರು ಸಮೀಕ್ಷೆ, ಕರಾವಳಿಯಲ್ಲಿ ಕೋಮು ಸಂಘರ್ಷ ವಿಚಾರಗಳ ಕುರಿತು ಧ್ವನಿಯೆತ್ತಲು ಸಿದ್ಧತೆ ನಡೆಸುತ್ತಿದೆ.

ಕಾಂಗ್ರೆಸ್ ಉತ್ತಮ ಆಡಳಿತ ನೀಡುವಲ್ಲಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣವಾದ ಸಮುದಾಯದ ಓಲೈಕೆ ರಾಜಕೀಯದಲ್ಲಿ ತೊಡಗಿದೆ. ಕಾಲ್ತುಳಿತದಿಂದ ಉಂಟಾಗುವ ಸಾವುಗಳು, ಜಾತಿ ಜನಗಣತಿಗೆ ತೆರಿಗೆದಾರರ ಹಣವನ್ನು ವ್ಯರ್ಥ ಮಾಡುವುದು ಮತ್ತು ಇನ್ನೂ ಹಲವು ವಿಷಯಗಳ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಚುನಾವಣೆಗಳು ಮತ್ತು ಬಿಬಿಎಂಪಿ ಸೇರಿದಂತೆ ಸ್ಥಳೀಯ ಚುನಾವಣೆಗಳು ಸೇರಿದಂತೆ ಹತ್ತಿರ ಬರುತ್ತಿದ್ದು, ನಮಗೆ ಬಲವಾದ ನಾಯಕತ್ವ ಬೇಕು. ಮುಂದಿನ ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷ ಸಂಘಟನೆಯನ್ನು ಬಲಪಡಿಸಬೇಕಾಗಿದೆ ಎಂಬುದು ಬಹುತೇಕರ ಒತ್ತಾಯವಾಗಿದೆ.

Tags:
error: Content is protected !!