Mysore
31
scattered clouds

Social Media

ಮಂಗಳವಾರ, 02 ಜೂನ್ 2026
Light
Dark

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಾರಿ ಮುಂಗಾರು ಪ್ರವೇಶ ತಡ ಆಗಲಿದೆ ಎನ್ನಲಾಗುತ್ತಿತ್ತು. ಆದರೆ ತಡ ಆಗಿಲ್ಲ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದಿನಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ. ಗದಗ, ಮೈಸೂರು ಸೇರಿದಂತೆ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್.‌3ರಿಂದ ಜೂನ್.‌5ರವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂನ್.‌1ರಿಂದ 4ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

Tags:
error: Content is protected !!