ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಅಕ್ಟೋಬರ್.29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಗದಗ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಮೈಸೂರಿನಲ್ಲಿ ಇಂದು ಭಾರೀ ಮಳೆಯಾಗಲಿದೆ.
ಇದನ್ನು ಓದಿ: ಮೊಂತಾ ಚಂಡಮಾರುತ ಎಫೆಕ್ಟ್ : ನಾಲ್ಕು ರಾಜ್ಯಗಳಿಗೆ ಭಾರೀ ಮಳೆಯ ಮುನ್ಸೂಚನೆ
ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿಯಲ್ಲಿ ನಾಳೆ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡ, ಯಾದಗಿರಿ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧೆಡೆ ಮಳೆಯಾಗಿದೆ. ಚಂಡಮಾರುತದಿಂದ ತಾಪಮಾನ ಕುಸಿತವಾಗಿ ಚಳಿಯ ಅನುಭವವಾಗುತ್ತಿದೆ.
ಇಂದು ಮಧ್ಯಾಹ್ನದ ವೇಳೆಗೆ ಚಂಡಮಾರುತ ಬಲಗೊಳ್ಳುವ ಸಾಧ್ಯತೆಯಿದ್ದು, ಆಂಧ್ರಪ್ರದೇಶ ಕರಾವಳಿ ದಾಟಲಿದೆ.
ಗಂಟೆಗೆ 100 ಕಿ.ಮೀ ವೇಗದವರೆಗೂ ಗಾಳಿ ಬೀಸಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…