ರಾಜ್ಯ

ಬೌದ್ಧ ಬಿಕ್ಕುಗಳಿಗೆ ಶೀಘ್ರದಲ್ಲೇ ಮಾಸಿಕ ಸಂಭಾವನೆ : ಸರ್ಕಾರ ಘೋಷಣೆ

ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆಯನ್ನು ಶೀಘ್ರದಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.

ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಪರವಾಗಿ ಅವರು ಉತ್ತರಿಸಿದರು.

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ನೋಂದಾಯಿತ ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಹಾಗೂ ರಾಜ್ಯದ ವಕ್ಸ್ ನೊಂದಾಯಿತ ಮಸೀದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್ ಇಮಾಮ್ ಮತ್ತು ಮುಯೀಜ್ಜನ್ ಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತಿದೆ. ಅದರಂತೆ ಬೌದ್ಧ ಬಿಕ್ಕುಗಳಿಗೂ ಪ್ರಾರಂಭಿಸಲಾಗುವುದು ಎಂದು ಘೋಷಣೆ ಮಾಡಿದರು.

ಇದನ್ನೂ ಓದಿ:-ಮಂಡ್ಯ | SSLC ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ : ಜಿ.ಪಂ.ಸಿಇಓ ನಂದಿನಿ

ಈ ವೇಳೆ ಕೆ.ಶಿವಕುಮಾರ್ ಅವರು ಮಾತನಾಡಿ, ರಾಜ್ಯದಲ್ಲಿ 80ಕ್ಕೂ ಹೆಚ್ಚು ಬುದ್ಧವಿಹಾರಗಳಿದ್ದು, 200ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳು ಸೇವೆ ಸಲ್ಲಿಸುತ್ತಿದ್ದಾರೆ. ದಾನಿಗಳ ನೆರವಿನಿಂದ ನಿರ್ಮಾಣ ಮಾಡಿರುವ ಬುದ್ಧವಿಹಾರಗಳ ನಿರ್ವಹಣೆ ಕಷ್ಟಕರವಾಗಿದೆ. ಸರ್ಕಾರದಿಂದ ಸಹಾಯಧನ ದೊರಕುತ್ತಿಲ್ಲ. ಈ ಹಿಂದೆ ಇದ್ದಂತಹ ಯಾವುದೇ ಸರ್ಕಾರಗಳು ಕೂಡ ಸಹಾಯಧನ ನೀಡಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಅಭಿಮಾನಿಗಳು ಸೇರಿದಂತೆ ಬೌದ್ಧಧರ್ಮವನ್ನು ಒಪ್ಪಿಕೊಂಡಿರುವ ಬಹಳಷ್ಟು ಅನುಯಾಯಿಗಳು ಸೇರಿ ಬುದ್ಧವಿಹಾರಗಳನ್ನು ನಿರ್ಮಿಸಿದ್ದಾರೆ. ಇವುಗಳನ್ನು ಸ್ಥಳೀಯ ಸಂಸ್ಥೆಗಳು ನಿರ್ವಹಣೆ ಮಾಡಬೇಕು. ಜೊತೆಗೆ ಬೌದ್ಧ ಬಿಕ್ಕುಗಳು ಹಾಗೂ ಅವರ ಸಹಾಯಕರಿಗೆ ಸರ್ಕಾರದಿಂದ ಸಹಾಯಧನ ನೀಡವುದರಿಂದ ಬುದ್ಧವಿಹಾರ ನಡೆಸಲು ಸಹಕಾರಿಯಾಗಲಿದೆ ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

4 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

17 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

17 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

17 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

17 hours ago