ರಾಜ್ಯ

ಮಂತ್ರಾಲಯದಲ್ಲೂ ಮೂಲರಾಮನ ಮೂರ್ತಿ ಅನಾವರಣ!

ಮಂತ್ರಾಲಯ: ಜನವರಿ ೨೨ರಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲ ರಾಮನ ಪ್ರತಿಷ್ಠಾಪನೆಯಾಗುತ್ತಿದ್ದು, ಅದೇ ದಿನ ಶ್ರೀ ಕ್ಷೇತ್ರ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಮೂಲ ದೇವರಾದ ಶ್ರಿಮನ್‌ ಮೂಲರಾಮದೇವರ ರಪ್ರತಿಮೆ ಅನಾವರಣಗೊಳ್ಳಿದೆ.

ಈ ಮೂಲಕ ಅಯೋಧ್ಯೆ ರಾಮ ಮಂದಿರ ಹಾಗೂ ಮಂತ್ರಾಲಯ ಮೂಲ ರಾಮ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮ ಒಂದಕ್ಕೊಂದು ತಳಕು ಹಾಕಿಕೊಂಡಿದೆ.

ಜ.೨೨ ರಂದು ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸಾಂಕೇತಿಕವಾಗಿ ಮೂಲರಾಮ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. ಮೂರ್ತಿ ಹಾಗೂ ಕಟ್ಟಡಗಳ ಕಾಮಗಾರಿ ಸಂಪೂರ್ಣವಾದ ಬಳಿಕ ಪ್ರತಿಮೆಯನ್ನು ಶಾಸ್ತ್ರೋಕ್ತವಾಗಿ ಲೋಕಾರ್ಪಣೆ ಮಾಡಲಾಗುವುದಾಗಿ ಶ್ರೀಮಠದ ಆಡಳಿತ ಮಂಡಳಿ ತಿಳಿಸಿದೆ.

೫೪ ಅಡಿ ಎತ್ತರದ ಭವ್ಯ ರಾಮ ಪ್ರತಿಮೆ
ಮಂತ್ರಾಲಯದಲ್ಲಿ ನೆಲೆನಿಲ್ಲಲಿರುವ ಮೂಲರಾಮ ದೇವರ ಪ್ರತಿಮೆ ಸುಮಾರು ೨೫೦ ಟನ್‌ ತೂಕ ೫೪ ಅಡಿ ಎತ್ತರವಿದೆ. ಈಗಾಗಲೆ ಪ್ರತಿಮೆಯ ಕೆಲಸ ೯೦ ಭಾಗ ಸಂಪೂರ್ಣವಾಗಿದ್ದು, ಇನ್ನೇನು ಕೊನೆ ಹಂತದ ಕೆಲಸ ಬಾಕಿ ಉಳಿದಿದೆ. ಕಾಮಗಾರಿ ಸಂಪೂರ್ಣವಾದ ಬಳಿಕ ಹೋಮ-ಹವನ, ವೇದಮಂತ್ರಗಳೊಂದಿಗೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಆಯೋಧ್ಯೆ ರಾಮನಿಗೂ ಮಂತ್ರಾಲಯದ ಶ್ರೀಮಠದಲ್ಲಿ ಪೂಜಿಸಲ್ಪಡುವ ಮೂಲರಾಮ ದೇವರಿಗೂ ನಂಟು ಇದೆ. ದೇವಲೋಕದಲ್ಲಿ ಪ್ರತಿಮಾ ಮಾಧ್ಯಮದಲ್ಲಿ ಬ್ರಹ್ಮದೇವರು ಭಗವಂತನನ್ನು ಆರಾಧನೆ ಮಾಡಬೇಕು ಎಂದು ಸಂಪಲ್ಪಿಸಿ ವಿಶ್ವಕರ್ಮರಿಂದ ಶುದ್ಧ ತಾಮ್ರದ ಪ್ರತಿಮೆಯನ್ನು ಮಾಡಿಸಿದರು. ಸಕಲ ಸಲ್ಲಕ್ಷಣಗಳಿಂದ ಕೂಡಿದ ಪ್ರತಿಮೆಯನ್ನು ಬ್ರಹ್ಮದೇವರು ಪೂಜಿಸಿದರು. ಕಾಲಕ್ರಮೇಣ ಎಲ್ಲಾ ದೇವಾನು ದೇವತೆಗಳು, ಋಷಿ ಮುನಿಗಳು ಈ ಮೂರ್ತಿಯನ್ನು ಪೂಜಿಸಿದ್ದಾರೆ. ಹಾಗೇ ಅಯೋಧ್ಯೆಗೂ ಈ ಮೂರ್ತಿ ಬಂದಿದೆ. ರಾಮನ ಪೂರ್ವಜರೂ ಈ ಮೂರ್ತಿಯನ್ನು ಪೂಜಿಸಿದ್ದಾರೆ. ಸ್ವತಃ ರಾಮನೂ ಈ ಮೂರ್ತಿಯನ್ನು ಪೂಜೆ ಮಾಡಿದ ನಂತರ ಈ ಮೂರ್ತಿ ಮೂಲರಾಮನಾಗಿ ಪರ್ವರ್ತನೆಯಾಗಿದ್ದು. ಈ ರೀತಿ ಶ್ರೀ ಮಠದ ಮೂಲರಾಮರಿಗೂ ಆಯೋಧ್ಯೆ ರಾಮರಿಗೂ ಅವಿನಾಭಾವ ಸಂಬಂಧವಿದೆ.
– ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳು
ಪೀಠಾಧಿಪತಿಗಳು, ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಮಂತ್ರಾಲಯ

andolanait

Recent Posts

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

21 mins ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

4 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

4 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

4 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

4 hours ago