ರಾಜ್ಯ

ಮಂತ್ರಾಲಯದಲ್ಲೂ ಮೂಲರಾಮನ ಮೂರ್ತಿ ಅನಾವರಣ!

ಮಂತ್ರಾಲಯ: ಜನವರಿ ೨೨ರಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲ ರಾಮನ ಪ್ರತಿಷ್ಠಾಪನೆಯಾಗುತ್ತಿದ್ದು, ಅದೇ ದಿನ ಶ್ರೀ ಕ್ಷೇತ್ರ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಮೂಲ ದೇವರಾದ ಶ್ರಿಮನ್‌ ಮೂಲರಾಮದೇವರ ರಪ್ರತಿಮೆ ಅನಾವರಣಗೊಳ್ಳಿದೆ.

ಈ ಮೂಲಕ ಅಯೋಧ್ಯೆ ರಾಮ ಮಂದಿರ ಹಾಗೂ ಮಂತ್ರಾಲಯ ಮೂಲ ರಾಮ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮ ಒಂದಕ್ಕೊಂದು ತಳಕು ಹಾಕಿಕೊಂಡಿದೆ.

ಜ.೨೨ ರಂದು ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸಾಂಕೇತಿಕವಾಗಿ ಮೂಲರಾಮ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. ಮೂರ್ತಿ ಹಾಗೂ ಕಟ್ಟಡಗಳ ಕಾಮಗಾರಿ ಸಂಪೂರ್ಣವಾದ ಬಳಿಕ ಪ್ರತಿಮೆಯನ್ನು ಶಾಸ್ತ್ರೋಕ್ತವಾಗಿ ಲೋಕಾರ್ಪಣೆ ಮಾಡಲಾಗುವುದಾಗಿ ಶ್ರೀಮಠದ ಆಡಳಿತ ಮಂಡಳಿ ತಿಳಿಸಿದೆ.

೫೪ ಅಡಿ ಎತ್ತರದ ಭವ್ಯ ರಾಮ ಪ್ರತಿಮೆ
ಮಂತ್ರಾಲಯದಲ್ಲಿ ನೆಲೆನಿಲ್ಲಲಿರುವ ಮೂಲರಾಮ ದೇವರ ಪ್ರತಿಮೆ ಸುಮಾರು ೨೫೦ ಟನ್‌ ತೂಕ ೫೪ ಅಡಿ ಎತ್ತರವಿದೆ. ಈಗಾಗಲೆ ಪ್ರತಿಮೆಯ ಕೆಲಸ ೯೦ ಭಾಗ ಸಂಪೂರ್ಣವಾಗಿದ್ದು, ಇನ್ನೇನು ಕೊನೆ ಹಂತದ ಕೆಲಸ ಬಾಕಿ ಉಳಿದಿದೆ. ಕಾಮಗಾರಿ ಸಂಪೂರ್ಣವಾದ ಬಳಿಕ ಹೋಮ-ಹವನ, ವೇದಮಂತ್ರಗಳೊಂದಿಗೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಆಯೋಧ್ಯೆ ರಾಮನಿಗೂ ಮಂತ್ರಾಲಯದ ಶ್ರೀಮಠದಲ್ಲಿ ಪೂಜಿಸಲ್ಪಡುವ ಮೂಲರಾಮ ದೇವರಿಗೂ ನಂಟು ಇದೆ. ದೇವಲೋಕದಲ್ಲಿ ಪ್ರತಿಮಾ ಮಾಧ್ಯಮದಲ್ಲಿ ಬ್ರಹ್ಮದೇವರು ಭಗವಂತನನ್ನು ಆರಾಧನೆ ಮಾಡಬೇಕು ಎಂದು ಸಂಪಲ್ಪಿಸಿ ವಿಶ್ವಕರ್ಮರಿಂದ ಶುದ್ಧ ತಾಮ್ರದ ಪ್ರತಿಮೆಯನ್ನು ಮಾಡಿಸಿದರು. ಸಕಲ ಸಲ್ಲಕ್ಷಣಗಳಿಂದ ಕೂಡಿದ ಪ್ರತಿಮೆಯನ್ನು ಬ್ರಹ್ಮದೇವರು ಪೂಜಿಸಿದರು. ಕಾಲಕ್ರಮೇಣ ಎಲ್ಲಾ ದೇವಾನು ದೇವತೆಗಳು, ಋಷಿ ಮುನಿಗಳು ಈ ಮೂರ್ತಿಯನ್ನು ಪೂಜಿಸಿದ್ದಾರೆ. ಹಾಗೇ ಅಯೋಧ್ಯೆಗೂ ಈ ಮೂರ್ತಿ ಬಂದಿದೆ. ರಾಮನ ಪೂರ್ವಜರೂ ಈ ಮೂರ್ತಿಯನ್ನು ಪೂಜಿಸಿದ್ದಾರೆ. ಸ್ವತಃ ರಾಮನೂ ಈ ಮೂರ್ತಿಯನ್ನು ಪೂಜೆ ಮಾಡಿದ ನಂತರ ಈ ಮೂರ್ತಿ ಮೂಲರಾಮನಾಗಿ ಪರ್ವರ್ತನೆಯಾಗಿದ್ದು. ಈ ರೀತಿ ಶ್ರೀ ಮಠದ ಮೂಲರಾಮರಿಗೂ ಆಯೋಧ್ಯೆ ರಾಮರಿಗೂ ಅವಿನಾಭಾವ ಸಂಬಂಧವಿದೆ.
– ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳು
ಪೀಠಾಧಿಪತಿಗಳು, ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಮಂತ್ರಾಲಯ

andolanait

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

4 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

30 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago