ರಾಜ್ಯ

ಮಂತ್ರಾಲಯದಲ್ಲೂ ಮೂಲರಾಮನ ಮೂರ್ತಿ ಅನಾವರಣ!

ಮಂತ್ರಾಲಯ: ಜನವರಿ ೨೨ರಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲ ರಾಮನ ಪ್ರತಿಷ್ಠಾಪನೆಯಾಗುತ್ತಿದ್ದು, ಅದೇ ದಿನ ಶ್ರೀ ಕ್ಷೇತ್ರ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಮೂಲ ದೇವರಾದ ಶ್ರಿಮನ್‌ ಮೂಲರಾಮದೇವರ ರಪ್ರತಿಮೆ ಅನಾವರಣಗೊಳ್ಳಿದೆ.

ಈ ಮೂಲಕ ಅಯೋಧ್ಯೆ ರಾಮ ಮಂದಿರ ಹಾಗೂ ಮಂತ್ರಾಲಯ ಮೂಲ ರಾಮ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮ ಒಂದಕ್ಕೊಂದು ತಳಕು ಹಾಕಿಕೊಂಡಿದೆ.

ಜ.೨೨ ರಂದು ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸಾಂಕೇತಿಕವಾಗಿ ಮೂಲರಾಮ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. ಮೂರ್ತಿ ಹಾಗೂ ಕಟ್ಟಡಗಳ ಕಾಮಗಾರಿ ಸಂಪೂರ್ಣವಾದ ಬಳಿಕ ಪ್ರತಿಮೆಯನ್ನು ಶಾಸ್ತ್ರೋಕ್ತವಾಗಿ ಲೋಕಾರ್ಪಣೆ ಮಾಡಲಾಗುವುದಾಗಿ ಶ್ರೀಮಠದ ಆಡಳಿತ ಮಂಡಳಿ ತಿಳಿಸಿದೆ.

೫೪ ಅಡಿ ಎತ್ತರದ ಭವ್ಯ ರಾಮ ಪ್ರತಿಮೆ
ಮಂತ್ರಾಲಯದಲ್ಲಿ ನೆಲೆನಿಲ್ಲಲಿರುವ ಮೂಲರಾಮ ದೇವರ ಪ್ರತಿಮೆ ಸುಮಾರು ೨೫೦ ಟನ್‌ ತೂಕ ೫೪ ಅಡಿ ಎತ್ತರವಿದೆ. ಈಗಾಗಲೆ ಪ್ರತಿಮೆಯ ಕೆಲಸ ೯೦ ಭಾಗ ಸಂಪೂರ್ಣವಾಗಿದ್ದು, ಇನ್ನೇನು ಕೊನೆ ಹಂತದ ಕೆಲಸ ಬಾಕಿ ಉಳಿದಿದೆ. ಕಾಮಗಾರಿ ಸಂಪೂರ್ಣವಾದ ಬಳಿಕ ಹೋಮ-ಹವನ, ವೇದಮಂತ್ರಗಳೊಂದಿಗೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಆಯೋಧ್ಯೆ ರಾಮನಿಗೂ ಮಂತ್ರಾಲಯದ ಶ್ರೀಮಠದಲ್ಲಿ ಪೂಜಿಸಲ್ಪಡುವ ಮೂಲರಾಮ ದೇವರಿಗೂ ನಂಟು ಇದೆ. ದೇವಲೋಕದಲ್ಲಿ ಪ್ರತಿಮಾ ಮಾಧ್ಯಮದಲ್ಲಿ ಬ್ರಹ್ಮದೇವರು ಭಗವಂತನನ್ನು ಆರಾಧನೆ ಮಾಡಬೇಕು ಎಂದು ಸಂಪಲ್ಪಿಸಿ ವಿಶ್ವಕರ್ಮರಿಂದ ಶುದ್ಧ ತಾಮ್ರದ ಪ್ರತಿಮೆಯನ್ನು ಮಾಡಿಸಿದರು. ಸಕಲ ಸಲ್ಲಕ್ಷಣಗಳಿಂದ ಕೂಡಿದ ಪ್ರತಿಮೆಯನ್ನು ಬ್ರಹ್ಮದೇವರು ಪೂಜಿಸಿದರು. ಕಾಲಕ್ರಮೇಣ ಎಲ್ಲಾ ದೇವಾನು ದೇವತೆಗಳು, ಋಷಿ ಮುನಿಗಳು ಈ ಮೂರ್ತಿಯನ್ನು ಪೂಜಿಸಿದ್ದಾರೆ. ಹಾಗೇ ಅಯೋಧ್ಯೆಗೂ ಈ ಮೂರ್ತಿ ಬಂದಿದೆ. ರಾಮನ ಪೂರ್ವಜರೂ ಈ ಮೂರ್ತಿಯನ್ನು ಪೂಜಿಸಿದ್ದಾರೆ. ಸ್ವತಃ ರಾಮನೂ ಈ ಮೂರ್ತಿಯನ್ನು ಪೂಜೆ ಮಾಡಿದ ನಂತರ ಈ ಮೂರ್ತಿ ಮೂಲರಾಮನಾಗಿ ಪರ್ವರ್ತನೆಯಾಗಿದ್ದು. ಈ ರೀತಿ ಶ್ರೀ ಮಠದ ಮೂಲರಾಮರಿಗೂ ಆಯೋಧ್ಯೆ ರಾಮರಿಗೂ ಅವಿನಾಭಾವ ಸಂಬಂಧವಿದೆ.
– ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳು
ಪೀಠಾಧಿಪತಿಗಳು, ಶ್ರೀ ರಾಘವೇಂದ್ರಸ್ವಾಮಿಗಳ ಮಠ, ಮಂತ್ರಾಲಯ

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

32 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago