ರಾಜ್ಯ

ಮಕ್ಕಳಲ್ಲೂ ಹೆಚ್ಚು ಕ್ಯಾನ್ಸರ್‌ ಪತ್ತೆ: ಸಚಿವ ಶರಣು ಪ್ರಕಾಶ್‌ ಪಾಟೀಲ್‌

 

ಬೆಂಗಳೂರು: ಮಕ್ಕಳಲ್ಲಿಯೂ ಹೆಚ್ಚು ಕ್ಯಾನ್ಸರ್‌ ಆಗುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವ ಶರಣು ಪ್ರಕಾಶ್‌ ಪಾಟೀಲ್‌ ಅಂಕಿ-ಅಂಶಗಳ ಸಮೇತ ಉತ್ತರಿಸಿದ್ದಾರೆ.

ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ ಸದಸ್ಯೆ ಉಮಾಶ್ರೀ ಅವರು ಕೇಳಿದ ಪ್ರಶ್ನೆಗೆ ಸಚಿವ ಶರಣು ಪ್ರಕಾಶ್‌ ಪಾಟೀಲ್‌ ಉತ್ತರಿಸಿದರು.

ಪ್ರತಿ ವರ್ಷ ರಾಜ್ಯದಲ್ಲಿ 14 ವರ್ಷದೊಳಗಿನ ಮಕ್ಕಳಲ್ಲಿ 1533 ಪ್ರಕರಣಗಳು ಕಂಡುಬರುತ್ತಿವೆ. ಗಂಡು ಮಕ್ಕಳಲ್ಲಿ 876 ಕೇಸ್‌ ಮತ್ತು ಹೆಣ್ಣುಮಕ್ಕಳಲ್ಲಿ 657 ದಾಖಲಾಗುತ್ತಿದೆ. ಗಂಡು ಮಕ್ಕಳಲ್ಲಿ 45% ರಕ್ತ ಕ್ಯಾನ್ಸರ್‌, 14.5% ಲಿಂಪೋಮಾ ಕ್ಯಾನ್ಸರ್‌, 12.9% ಮೆದುಳು, 5.6% ಮೂಳೆ ಸಂಬಂಧಿಸಿದ ಕ್ಯಾನ್ಸರ್‌, 3.6% ಮೂತ್ರಪಿಂಡ ಕ್ಯಾನ್ಸರ್‌, 2.6% ಕಣ್ಣಿನ ಕ್ಯಾನ್ಸರ್‌ ಬರುತ್ತಿದೆ.

ಹೆಣ್ಣುಮಕ್ಕಳಲ್ಲಿ 44.6% ರಕ್ತ ಕ್ಯಾನ್ಸರ್‌, 12.1% ಮೆದುಳು ಕ್ಯನ್ಸರ್‌, 9.5% ದುಗ್ದ ಗ್ರಂಥಿ, 5.8% ಮೂಳೆ ಕ್ಯಾನ್ಸರ್‌ ಹಾಗೂ 3.4% ಮೃದು ಅಂಗಾಂಗ ಕ್ಯಾನ್ಸರ್‌ ಪತೆತಯಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕಿದ್ವಾಯಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿದ್ದು, ABRKಯಲ್ಲಿ ಚಿಕಿತ್ಸೆಗೆ ಹಣ ಕೊಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಇನ್ನೂ ಮೈಸೂರು, ಕಲಬುರಗಿ, ಹುಬ್ಬಳ್ಳಿಯಲ್ಲಿ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಕ್ಯಾನ್ಸರ್‌ ಬಗ್ಗೆ ಜಿಲ್ಲೆ, ತಾಲೂಕು ಮಟ್ಟದ ಜಾಗೃತಿ ಮೂಡಿಸಲು ಕ್ರಮವಹಿಸುತ್ತೇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

9 mins ago

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

1 hour ago

ಓದುಗರ ಪತ್ರ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರ ನಿರ್ಲಕ್ಷ್ಯ

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…

1 hour ago

ಓದುಗರ ಪತ್ರ: ಗರಳಪುರಿ ಉತ್ಸವ ಸ್ವಾಗತಾರ್ಹ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…

1 hour ago

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

4 hours ago