ಬೆಂಗಳೂರು: ಮಕ್ಕಳಲ್ಲಿಯೂ ಹೆಚ್ಚು ಕ್ಯಾನ್ಸರ್ ಆಗುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವ ಶರಣು ಪ್ರಕಾಶ್ ಪಾಟೀಲ್ ಅಂಕಿ-ಅಂಶಗಳ ಸಮೇತ ಉತ್ತರಿಸಿದ್ದಾರೆ.
ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರು ಕೇಳಿದ ಪ್ರಶ್ನೆಗೆ ಸಚಿವ ಶರಣು ಪ್ರಕಾಶ್ ಪಾಟೀಲ್ ಉತ್ತರಿಸಿದರು.
ಪ್ರತಿ ವರ್ಷ ರಾಜ್ಯದಲ್ಲಿ 14 ವರ್ಷದೊಳಗಿನ ಮಕ್ಕಳಲ್ಲಿ 1533 ಪ್ರಕರಣಗಳು ಕಂಡುಬರುತ್ತಿವೆ. ಗಂಡು ಮಕ್ಕಳಲ್ಲಿ 876 ಕೇಸ್ ಮತ್ತು ಹೆಣ್ಣುಮಕ್ಕಳಲ್ಲಿ 657 ದಾಖಲಾಗುತ್ತಿದೆ. ಗಂಡು ಮಕ್ಕಳಲ್ಲಿ 45% ರಕ್ತ ಕ್ಯಾನ್ಸರ್, 14.5% ಲಿಂಪೋಮಾ ಕ್ಯಾನ್ಸರ್, 12.9% ಮೆದುಳು, 5.6% ಮೂಳೆ ಸಂಬಂಧಿಸಿದ ಕ್ಯಾನ್ಸರ್, 3.6% ಮೂತ್ರಪಿಂಡ ಕ್ಯಾನ್ಸರ್, 2.6% ಕಣ್ಣಿನ ಕ್ಯಾನ್ಸರ್ ಬರುತ್ತಿದೆ.
ಹೆಣ್ಣುಮಕ್ಕಳಲ್ಲಿ 44.6% ರಕ್ತ ಕ್ಯಾನ್ಸರ್, 12.1% ಮೆದುಳು ಕ್ಯನ್ಸರ್, 9.5% ದುಗ್ದ ಗ್ರಂಥಿ, 5.8% ಮೂಳೆ ಕ್ಯಾನ್ಸರ್ ಹಾಗೂ 3.4% ಮೃದು ಅಂಗಾಂಗ ಕ್ಯಾನ್ಸರ್ ಪತೆತಯಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕಿದ್ವಾಯಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿದ್ದು, ABRKಯಲ್ಲಿ ಚಿಕಿತ್ಸೆಗೆ ಹಣ ಕೊಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ಇನ್ನೂ ಮೈಸೂರು, ಕಲಬುರಗಿ, ಹುಬ್ಬಳ್ಳಿಯಲ್ಲಿ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಕ್ಯಾನ್ಸರ್ ಬಗ್ಗೆ ಜಿಲ್ಲೆ, ತಾಲೂಕು ಮಟ್ಟದ ಜಾಗೃತಿ ಮೂಡಿಸಲು ಕ್ರಮವಹಿಸುತ್ತೇವೆ ಎಂದು ತಿಳಿಸಿದರು.
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…