ರಾಜ್ಯ

ಮಕ್ಕಳಲ್ಲೂ ಹೆಚ್ಚು ಕ್ಯಾನ್ಸರ್‌ ಪತ್ತೆ: ಸಚಿವ ಶರಣು ಪ್ರಕಾಶ್‌ ಪಾಟೀಲ್‌

 

ಬೆಂಗಳೂರು: ಮಕ್ಕಳಲ್ಲಿಯೂ ಹೆಚ್ಚು ಕ್ಯಾನ್ಸರ್‌ ಆಗುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವ ಶರಣು ಪ್ರಕಾಶ್‌ ಪಾಟೀಲ್‌ ಅಂಕಿ-ಅಂಶಗಳ ಸಮೇತ ಉತ್ತರಿಸಿದ್ದಾರೆ.

ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ ಸದಸ್ಯೆ ಉಮಾಶ್ರೀ ಅವರು ಕೇಳಿದ ಪ್ರಶ್ನೆಗೆ ಸಚಿವ ಶರಣು ಪ್ರಕಾಶ್‌ ಪಾಟೀಲ್‌ ಉತ್ತರಿಸಿದರು.

ಪ್ರತಿ ವರ್ಷ ರಾಜ್ಯದಲ್ಲಿ 14 ವರ್ಷದೊಳಗಿನ ಮಕ್ಕಳಲ್ಲಿ 1533 ಪ್ರಕರಣಗಳು ಕಂಡುಬರುತ್ತಿವೆ. ಗಂಡು ಮಕ್ಕಳಲ್ಲಿ 876 ಕೇಸ್‌ ಮತ್ತು ಹೆಣ್ಣುಮಕ್ಕಳಲ್ಲಿ 657 ದಾಖಲಾಗುತ್ತಿದೆ. ಗಂಡು ಮಕ್ಕಳಲ್ಲಿ 45% ರಕ್ತ ಕ್ಯಾನ್ಸರ್‌, 14.5% ಲಿಂಪೋಮಾ ಕ್ಯಾನ್ಸರ್‌, 12.9% ಮೆದುಳು, 5.6% ಮೂಳೆ ಸಂಬಂಧಿಸಿದ ಕ್ಯಾನ್ಸರ್‌, 3.6% ಮೂತ್ರಪಿಂಡ ಕ್ಯಾನ್ಸರ್‌, 2.6% ಕಣ್ಣಿನ ಕ್ಯಾನ್ಸರ್‌ ಬರುತ್ತಿದೆ.

ಹೆಣ್ಣುಮಕ್ಕಳಲ್ಲಿ 44.6% ರಕ್ತ ಕ್ಯಾನ್ಸರ್‌, 12.1% ಮೆದುಳು ಕ್ಯನ್ಸರ್‌, 9.5% ದುಗ್ದ ಗ್ರಂಥಿ, 5.8% ಮೂಳೆ ಕ್ಯಾನ್ಸರ್‌ ಹಾಗೂ 3.4% ಮೃದು ಅಂಗಾಂಗ ಕ್ಯಾನ್ಸರ್‌ ಪತೆತಯಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕಿದ್ವಾಯಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿದ್ದು, ABRKಯಲ್ಲಿ ಚಿಕಿತ್ಸೆಗೆ ಹಣ ಕೊಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಇನ್ನೂ ಮೈಸೂರು, ಕಲಬುರಗಿ, ಹುಬ್ಬಳ್ಳಿಯಲ್ಲಿ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಕ್ಯಾನ್ಸರ್‌ ಬಗ್ಗೆ ಜಿಲ್ಲೆ, ತಾಲೂಕು ಮಟ್ಟದ ಜಾಗೃತಿ ಮೂಡಿಸಲು ಕ್ರಮವಹಿಸುತ್ತೇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

4 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

4 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

4 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

4 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

4 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

5 hours ago