ಬೆಂಗಳೂರು : ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ. ಜತೆಗೆ ಕೃಷಿ ಕ್ಷೇತ್ರದಿಂದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಕೆವಿಕೆ ಸಭಾಂಗಣದಲ್ಲಿ “ವಿಜಯ ಕರ್ನಾಟಕ” ಪತ್ರಿಕೆ ಆಯೋಜಿಸಿದ್ದ “ಸೂಪರ್ ಸ್ಟಾರ್ ರೈತ” ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಧಕ ರೈತರನ್ನು ಪುರಸ್ಕರಿಸಿ ಅವರು ಮಾತನಾಡಿದರು.
ಶೇ.70 ರಷ್ಟು ಗ್ರಾಮೀಣ ಭಾರತ ಕೃಷಿ ಮೇಲೆ ಅವಲಂಬಿತವಾಗಿದೆ. ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಭಿ, ಸ್ವಾಭಿಮಾನಿ ಆಗಲು ಕೃಷಿಕ ಸಮುದಾಯ, ರೈತ ಸಮುದಾಯ ಕಾರಣ ಎಂದರು.
ಕೃಷಿ ಅಧಿಕಾರಿಗಳು ರೈತರ ಅಭಿಪ್ರಾಯ ಪಡೆದು, ರೈತರ ಅನುಭವ ಆಧಾರಿತ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸಹಕಾರ ನೀಡಬೇಕು. Lab to Land ಮತ್ತು Land to Lab ಕಡೆಗೆ ಕೃಷಿ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.
ಸಾಮಾಜಿಕ ನ್ಯಾಯ, ವರ್ಗ ರಹಿತ ಸಮಾಜ ಆಗಬೇಕಾದರೆ ರೈತರಿಗೆ ಆರ್ಥಿಕವಾಗಿ ಶಕ್ತಿ ನೀಡಬೇಕು. ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ಸಾಮಾಜಿಕ ಬದಲಾವಣೆ ದಿಕ್ಕಿನಲ್ಲಿ ನಾವು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು. ಇದರಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರೂ ಸುಳ್ಳು ಹೇಳಿದ್ದರು. ಸತ್ಯ ಏನು ಎಂದು ನಾಡಿನ ಜನತೆಗೆ ಮನವರಿಕೆಯಾಗಿದೆ ಎಂದರು.
ರೈತರ ಪಂಪ್ ಸೆಟ್ ಗಳಿಗೆ ವರ್ಷಕ್ಕೆ ನಮ್ಮ ಸರ್ಕಾರ 19000 ಕೋಟಿ ಸಬ್ಸಿಡಿ ನೀಡುತ್ತಿದೆ. ಕೃಷಿ ನೀರಾವರಿಗೆ 26000 ಕೋಟಿ ನೀಡಿದ್ದೇವೆ. ಆರ್ಥಿಕತೆ ದಿವಾಳಿಯಾಗಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲು ಸಾಧ್ಯವಿತ್ತೇ ಎಂದು ರೈತ ಸಮಾಜವನ್ನು ಪ್ರಶ್ನಿಸಿದರು.
ಇಂಥಾ ಹೊತ್ತಲ್ಲಿ ರೈತ ಸಾಧಕರನ್ನು ಗುರುತಿಸಿ ಕರೆದು ಸನ್ಮಾನಿಸುತ್ತಿರುವುದು ಅತ್ಯಂತ ಪ್ರೋತ್ಸಾಹದಾಯಕ. ಸಮಗ್ರ ಕೃಷಿಯನ್ನು ಮಾಡದ ಹೊರತು ಕೃಷಿ ಲಾಭದಾಯಕವಲ್ಲ. ಜನಸಂಖ್ಯೆ ಬೆಳೆಯುತ್ತಿದೆ. ನಮ್ಮ ರಾಜ್ಯದಲ್ಲಿ ರಾಜಸ್ತಾನದ ನಂತರ ಅತಿ ಹೆಚ್ಚು ಒಣ ಕೃಷಿ ಭೂಮಿ ಹೆಚ್ಚು ಹೊಂದಿದೆ ಎಂದರು.
ನಾವು ಜಾರಿಗೆ ತಂದಿದ್ದ ಕೃಷಿ ಭಾಗ್ಯ ಯೋಜನೆಯನ್ನು ನಮ್ಮ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿತ್ತು. ಈಗ ನಾವೇ ಅಧಿಕಾರಕ್ಕೆ ಬಂದು ಮತ್ತೆ ಜಾರಿ ಮಾಡಿದ್ದೇವೆ. ಇಲ್ಲಿಯವರೆಗೂ 24000 ಕೃಷಿ ಹೊಂಡ ನಿರ್ಮಿಸಿ ದಾಖಲೆ ಮಾಡಲಾಗಿದೆ ಎಂದರು.
ನಾನೂ ರೈತ ಕುಟುಂಬದಿಂದ ಬಂದವನು, ಕೃಷಿ ಬದುಕು-ರೈತರ ಬದುಕು, ಗ್ರಾಮೀಣ ಬದುಕಿನ ಕಷ್ಟ ನಷ್ಟಗಳು ನನಗೆ ಗೊತ್ತಿದೆ. ಹೀಗಾಗಿ ರೈತರ ಪರವಾಗಿ ಸರ್ಕಾರದ ಮುಂದೆ ಬಂದ ಎಲ್ಲಾ ಪ್ರಸ್ತಾವನೆಗಳಿಗೂ ಮಂಜೂರಾತಿ ನೀಡುತ್ತಿದ್ದೇವೆ. ರೈತರಿಗೆ ಹೆಚ್ಚು ಒತ್ತು ಕೊಡುವ ಕೆಲಸಗಳನ್ನು ಮಾಡುತ್ತಿದ್ದೇವೆ. ಅದರಲ್ಲೂ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ ಎಂದರು.
43% ಸಾವಯವ ಇಂಗಾಲ ಕಡಿಮೆ ಆಗುತ್ತಿರುವುದರಿಂದ ಭೂಮಿಯ ಫಲವತ್ತತೆ ಕಡಿಮೆ ಆಗಿ ರೈತರ ಉತ್ಪಾದನೆ, ಆದಾಯ ಕಡಿಮೆ ಆಗುತ್ತದೆ. ಇಂಥಾ ಹೊತ್ತಲ್ಲಿ “ಸೂಪರ್ ಸ್ಟಾರ್ ರೈತ” ಪುರಸ್ಕಾರಕ್ಕೆ ಒಳಗಾಗಿರುವವರು ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಂಡಿರುವುದು, ಇವರನ್ನು ವಿಜಯ ಕರ್ನಾಟಕ ಗುರುತಿಸಿರುವುದು ಒಳ್ಳೆಯದು ಎಂದರು.
ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಜಾರಿಗೆ ತಂದ “ನರೇಗಾ” ಕೃಷಿಗೆ ಬಹಳ ದೊಡ್ಡ ಅನುಕೂಲ ಕಲ್ಪಿಸಿತು ಎಂದರು.
ಕೃಷಿ ಸಚಿವರಾದ ಚಲುವರಾಯಸ್ವಾಮಿ, ಸಂಪಾದಕರಾದ ಸುದರ್ಶನ್ ಚನ್ನಂಗಿಹಳ್ಳಿ ಉಪಸ್ಥಿತರಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…