ರಾಜ್ಯ

‘ಬಿಜೆಪಿ-ಜೆಡಿಎಸ್ ಮೈತ್ರಿ ವಿರೋಧಿಸಿ’ ಮತ್ತಷ್ಟು ಮಂದಿ ಕಾಂಗ್ರೆಸ್ ಸೇರಲಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಮಂದಿಗೆ ಸೇರಲಿದ್ದು, ಹಳಬರು ಹೊಸಬರು ಎಂಬ ಬೇಧವಿಲ್ಲದೆ ಶ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶುಕ್ರವಾರ ಕೆಪಿಸಿಸಿಯ ಇಂದಿರಾ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸೇರುವವರ ದೊಡ್ಡ ಪಟ್ಟಿ ಇದೆ. ಅದನ್ನು ಈಗ ಬಹಿರಂಗಪಡಿಸುವುದಿಲ್ಲ. ಒಬ್ಬೊಬ್ಬರನ್ನೆ ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಈ ಪ್ರಕ್ರಿಯೆ ಇಲ್ಲಿಗೆ ನಿಲ್ಲಬಾರದು. ಪ್ರತಿ ಬೂತ್ ಹಾಗೂ ಹಳ್ಳಿಗಳಲ್ಲಿ ಇದೇ ರೀತಿ ಕಾರ್ಯಕ್ರಮಗಳನ್ನು ಮಾಡಿ ಅಲ್ಲಿನ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ ಅವರು ದೇಶದುದ್ದಗಲ ಭಾರತ ಜೋಡೋ ಯಾತ್ರೆ ಮಾಡಿ ದೇಶದ ಮನಸ್ಸುಗಳನ್ನು ಒಂದುಗೂಡಿಸಿದ್ದಾರೆ. ಈಗ ದೇಶದಲ್ಲಿ ಇಂಡಿಯಾ ಒಕ್ಕೂಟ ರೂಪುಗೊಂಡಿದ್ದು, ಇದಕ್ಕೆ ಎಲ್ಲರೂ ಸೇರಿ ಶಕ್ತಿ ತುಂಬಬೇಕು ಎಂದು ಹೇಳಿದರು.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಹಳಬರು ಹೊಸಬರು ಎಂಬ ಬೇಧವಿಲ್ಲದೆ ಶ್ರಮಿಸಬೇಕು. ರಾಜಕೀಯದಲ್ಲಿ ಭಿನ್ನಾಭಿಪ್ರಾಯ ಸಹಜ. ಆದರೆ ಪಕ್ಷದ ಸಿದ್ಧಾಂತಕ್ಕಾಗಿ ಎಲ್ಲಾ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದ ಅವರು, ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ನಡೆದಾಗ ಕನಕಪುರಕ್ಕಿಂತಲೂ ಹಿರಿಯೂರು ಕ್ಷೇತ್ರದಲ್ಲಿ ಹೆಚ್ಚಿನ ಸದಸ್ಯತ್ವ ಮಾಡಲಾಗಿತ್ತು. ಅದಕ್ಕೆ ತಕ್ಕಂತೆ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ ಬಂದಿದ್ದವು. ಈಗ ನಿಮ್ಮ ಸೇರ್ಪಡೆಯಿಂದ ನಮ್ಮ ಶಕ್ತಿ ಮತ್ತಷ್ಟು ಹೆಚ್ಚಾಗಿದೆ ಎಂದು ನುಡಿದರು.

andolanait

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

44 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

52 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

57 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

1 hour ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

1 hour ago