ರಾಜ್ಯ

ವಿಧಾನಸೌಧದಲ್ಲಿ ಮಾಧ್ಯಮಕ್ಕೆ ಇನ್ನಷ್ಟು ನಿರ್ಬಂಧ

ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿಯ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ತೆಗೆದುಕೊಳ್ಳಬಾರದು ಎಂದು ನಿಯಮ ತಂದಿದೆ.

ಪತ್ರದಲ್ಲಿ ಏನಿದೆ?
ವಾರ್ತಾ ಮತ್ತು ಪ್ರಚಾರ ಇಲಾಖೆಯು ಶಿಫಾರಸು ಮಾಡುವ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಕಾರ್ಯಕಾರಿ)ಯಲ್ಲಿ ಗುರುತಿನ ಚೀಟಿ ವಿತರಿಸಲಾಗುತ್ತಿದೆ. ಈ ರೀತಿ ಗುರುತಿನ ಚೀಟಿ ಹೊಂದಿರುವ ಎಲ್ಲ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳಿಗೆ ಭದ್ರತಾ ಹಿತದೃಷ್ಟಿಯಿಂದ ವಿಧಾನಸೌಧದ ಪಶ್ಚಿಮ ದ್ವಾರದ ಫೋರ್ಟಿಕೋ ಬಳಿ ನಿಗದಿಪಡಿಸಕಾಗಿರುವ ಸ್ಥಳದಲ್ಲಿ ಮಾತ್ರ ಹೇಳಿಕೆಗಳನ್ನು ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.
ವಿಧಾನಸೌಧ ಒಳ ಪ್ರವೇಶಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ, ಸಚಿವರು ಅಥವಾ ಗಣ್ಯ ವ್ಯಕ್ತಿಗಳಿಂದ ಬೈಟ್ ಪಡೆಯಲು ಅವರನ್ನು ಹಿಂಬಾಲಿಸದಂತೆ ಸೂಕ್ತ ಸಲಹೆ/ಸೂಚನೆಗಳನ್ನು ನೀಡುವಂತೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಹಿಂದೆಯೂ ಹೊರಡಿಸಿದ್ದ ಅಧಿಸೂಚನೆ
ಸಿದ್ದರಾಮಯ್ಯ ಅವರು ಈ ಹಿಂದೆ 2023-2018ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆಯೂ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಅಧಿಸೂಚನೆಯನ್ನು ಹೊರಡಿಸಿದ್ದರು. ವಿಧಾನಸೌಧದ ಬದಲು ವಾರ್ತಾ ಇಲಾಖೆಯಲ್ಲಿ ಸಚಿವರ ಮತ್ತು ಸಂಬಂಧಪಟ್ಟವರು ಪತ್ರಿಕಾಗೋಷ್ಠಿ ನಡೆಸುವಂತೆ ಸೂಚನೆ ಕೊಟ್ಟಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿದ್ದರಿಂದ ಕೊನೆಗೆ ಅಧಿಸೂಚನೆಯನ್ನು ಹಿಂಪಡೆಯಲಾಗಿತ್ತು.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago