ramlinga redyy
ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್ಗೆ ತಿಳಿಸಿದರು.
ಸದಸ್ಯ ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದ್ವಿಚಕ್ರ ವಾಹನ, ಬಸ್, ಕಾರು, ಟ್ರ್ಯಾಕ್ಟರ್ ಮತ್ತಿತರ ವಾಹನಗಳ ಅಪಘಾತದಿಂದ ದೇಶಾದ್ಯಂತ 1,25,000 ಜನ ಸಾವನ್ನಪ್ಪಿದರೆ, ರಾಜ್ಯದಲ್ಲಿ ಸಾವಿರಕ್ಕೂ ಅಧಿಕ ಜನ ಸಾಯುತ್ತಾರೆ ಎಂದು ಹೇಳಿದರು.
ಅಪಘಾತಗಳ ಪ್ರಕರಣಗಳನ್ನು ತಡೆಗಟ್ಟಲು ನಾವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕಟ್ಟುನಿಟ್ಟಿನ ದಂಡ ವಿಧಿಸುವುದು, ಡಿಎಲ್ ರದ್ದುಪಡಿಸುವುದು, ಕಾನೂನು ಕ್ರಮಗಳಂತಹ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದರೂ ಅಪಘಾತಗಳು ಕಡಿಮೆಯಾಗುತ್ತಿಲ್ಲ ಎಂದು ವಿಷಾದಿಸಿದರು.
ಶಾಲಾ ಕಾಲೇಜುಗಳಲ್ಲಿ ಮಕ್ಕಳು ಮತ್ತು ವಿದ್ಯಾರ್ಥಿಗಳಿಂದ ಜಾಗೃತಿ ಅಭಿಯಾನ, ಮದ್ಯಪಾನ ಮಾಡಿ ವಾಹನ ಚಾಲನೆ ನಿಷೇಧ, ವೀಲ್ಹಿಂಗ್ ಮಾಡಿದವರ ಡಿಎಲ್ ರದ್ದು ಸೇರಿದಂತೆ ಹತ್ತಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾವು ಎಷ್ಟೇ ಕಾನೂನು ಕ್ರಮ ವಿಧಿಸಿದರೂ ಜನರಲ್ಲಿ ಜಾಗೃತಿ ಬರದೆ ಇದ್ದರೆ ನಾವೇನು ಮಾಡಲು ಸಾಧ್ಯ? ಎಂದರು.
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…
ನವೀನ್ ಡಿಸೋಜ ಶಾಸಕ ಎ.ಎಸ್.ಪೊನ್ನಣ್ಣಗೆ ಒಲಿದ ಡೆಪ್ಯೂಟಿ ಸ್ಪೀಕರ್ ಸ್ಥಾನ; ಕೊಡಗಿನ ಜನರ ಈ ಬಾರಿಯ ನಿರೀಕ್ಷೆಯೂ ಹುಸಿ ಮಡಿಕೇರಿ:…
ಬಿ.ಟಿ.ಮೋಹನ್ ಕುಮಾರ್ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಮಂಡ್ಯ: ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಈ ಹಿಂದಿನ ಸಂಪುಟದಲ್ಲಿ ಸಚಿವರಾಗಿದ್ದ ಎನ್.ಚಲುವರಾಯಸ್ವಾಮಿ…
ಕೆ.ಬಿ. ರಮೇಶನಾಯಕ ಸಿದ್ದರಾಮಯ್ಯ ಸಂಪುಟದಲ್ಲಿ ೮ ವರ್ಷವೂ ಸಚಿವರಾಗಿದ್ದ ಡಾ.ಎಚ್ಸಿಎಂ ಹೊರಕ್ಕೆ ಪಿರಿಯಾಪಟ್ಟಣ ಕ್ಷೇತ್ರದ ಕೆ. ವೆಂಕಟೇಶ್ಗೂ ಕೊಕ್ ಮೈಸೂರು:…
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…